<p><strong>ಥಾಣೆ:</strong> ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಣದ (ಯುಬಿಟಿ) ನಾಯಕ ವಿನೋದ್ ಘೋಸಲ್ಕರ್ ಅವರ ಪುತ್ರ ಅಭಿಷೇಕ್ ಹತ್ಯೆ ಪ್ರಕರಣದ ಬಗ್ಗೆ ಮಹಾರಾಷ್ಟ್ರ ಸಚಿವ ಉದಯ್ ಸಾಮಂತ್ ಶುಕ್ರವಾರ ಆಘಾತ ವ್ಯಕ್ತಪಡಿಸಿದ್ದಾರೆ. ಯುಬಿಟಿಯಲ್ಲಿ ನಡೆಯುತ್ತಿರುವ 'ಗ್ಯಾಂಗ್ವಾರ್' ಈ ಕೃತ್ಯಕ್ಕೆ ಕಾರಣ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p><p>ಅಭಿಷೇಕ್ ಅವರನ್ನು ಗುರುವಾರ 'ಫೇಸ್ಬುಕ್ ಲೈವ್' ವೇಳೆ ಗುಂಡಿಕ್ಕಿ ಹತ್ಯೆ ಮಾಡಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಎಂಬಾತ ನಂತರ ತಾನೂ ಗುಂಡು ಹೊಡೆದುಕೊಂಡಿದ್ದ.</p><p>ಬೋರಿವಾಲಿ ಉಪನಗರದಲ್ಲಿರುವ ಮೌರಿಸ್ ಕಚೇರಿಯಲ್ಲಿ ನಡೆದ ಈ ಪ್ರಕರಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮಾಜಿ ಕಾರ್ಪೊರೇಟರ್ ಆಗಿರುವ ಅಭಿಷೇಕ್ ಅವರ ಕಿಬ್ಬೊಟ್ಟೆ ಮತ್ತು ಭುಜಕ್ಕೆ ಗುಂಡು ಬಿದ್ದಿತ್ತು.</p><p>ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸಾಮಂತ್, ರಾಜಕೀಯ ಶತ್ರುವಾಗಿದ್ದರೂ ಸರಿ, ಯಾರೂ ಈ ರೀತಿ ಪ್ರಾಣ ಕಳೆದುಕೊಳ್ಳಬಾರದು ಎಂದು ಮರುಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಯುಬಿಟಿಯ ಹಿರಿಯ ನಾಯಕರೊಂದಿಗೆ ಮೌರಿಸ್ ನಿಕಟ ಸಂಪರ್ಕ ಹೊಂದಿದ್ದ ಎಂದಿರುವ ಸಚಿವರು, ಮೌರಿಸ್ ಮತ್ತು ಯುಬಿಟಿಯ ನಾಯಕರು ಜೊತೆಗಿರುವ ಚಿತ್ರಗಳು ಶಿವಸೇನಾದ ಮುಖವಾಣಿ 'ಸಾಮ್ನಾ'ದಲ್ಲಿ ಪ್ರಕಟವಾಗಿರುವುದನ್ನು ಪ್ರದರ್ಶಿಸಿದರು.</p>.ಫೇಸ್ಬುಕ್ ಲೈವ್ನಲ್ಲೇ ಉದ್ಧವ್ ಠಾಕ್ರೆ ಗುಂಪಿನ ಮುಖಂಡನ ಗುಂಡಿಕ್ಕಿ ಹತ್ಯೆ.<p>ಮೌರಿಸ್ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಭೇಟಿಯಾಗಿದ್ದ ಎಂದು ಯುಬಿಟಿ ನಾಯಕ ಸಂಜಯ್ ರಾವುತ್ ಆರೋಪಿಸಿರುವುದಕ್ಕೆ ತಿರುಗೇಟು ನೀಡಿರುವ ಸಾಮಂತ್, ಇದು 'ಕಿಡಿಗೇಡಿತನದ ಹೇಳಿಕೆ' ಎಂದು ವಾಗ್ದಾಳಿ ನಡೆಸಿದ್ದಾರೆ.</p><p>ಅಭಿಷೇಕ್ ಹಾಗೂ ಮೌರಿಸ್ ನಡುವಣ ಸಂಭಾಷಣೆಯನ್ನು ಉಲ್ಲೇಖಿಸಿದ ಸಾಮಂತ್, ಯುಬಿಟಿಯ ಇಬ್ಬರು ನಾಯಕರು ಯೋಜನೆಗಳನ್ನು ರೂಪಿಸುತ್ತಿರುವ ಸಂದರ್ಭದಲ್ಲಿ, ಶಿವಸೇನೆಯ ಪಾತ್ರ ಏನಿರುತ್ತದೆ? ಎಂದು ಪ್ರಶ್ನಿಸಿದ್ದಾರೆ.</p><p>ಹತ್ಯೆ ಸಂಬಂಧ ಸಮಗ್ರ ತನಿಖೆ ನಡೆಸಲಾಗುವುದು ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಥಾಣೆ:</strong> ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಣದ (ಯುಬಿಟಿ) ನಾಯಕ ವಿನೋದ್ ಘೋಸಲ್ಕರ್ ಅವರ ಪುತ್ರ ಅಭಿಷೇಕ್ ಹತ್ಯೆ ಪ್ರಕರಣದ ಬಗ್ಗೆ ಮಹಾರಾಷ್ಟ್ರ ಸಚಿವ ಉದಯ್ ಸಾಮಂತ್ ಶುಕ್ರವಾರ ಆಘಾತ ವ್ಯಕ್ತಪಡಿಸಿದ್ದಾರೆ. ಯುಬಿಟಿಯಲ್ಲಿ ನಡೆಯುತ್ತಿರುವ 'ಗ್ಯಾಂಗ್ವಾರ್' ಈ ಕೃತ್ಯಕ್ಕೆ ಕಾರಣ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.</p><p>ಅಭಿಷೇಕ್ ಅವರನ್ನು ಗುರುವಾರ 'ಫೇಸ್ಬುಕ್ ಲೈವ್' ವೇಳೆ ಗುಂಡಿಕ್ಕಿ ಹತ್ಯೆ ಮಾಡಿದ್ದ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಎಂಬಾತ ನಂತರ ತಾನೂ ಗುಂಡು ಹೊಡೆದುಕೊಂಡಿದ್ದ.</p><p>ಬೋರಿವಾಲಿ ಉಪನಗರದಲ್ಲಿರುವ ಮೌರಿಸ್ ಕಚೇರಿಯಲ್ಲಿ ನಡೆದ ಈ ಪ್ರಕರಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮಾಜಿ ಕಾರ್ಪೊರೇಟರ್ ಆಗಿರುವ ಅಭಿಷೇಕ್ ಅವರ ಕಿಬ್ಬೊಟ್ಟೆ ಮತ್ತು ಭುಜಕ್ಕೆ ಗುಂಡು ಬಿದ್ದಿತ್ತು.</p><p>ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸಾಮಂತ್, ರಾಜಕೀಯ ಶತ್ರುವಾಗಿದ್ದರೂ ಸರಿ, ಯಾರೂ ಈ ರೀತಿ ಪ್ರಾಣ ಕಳೆದುಕೊಳ್ಳಬಾರದು ಎಂದು ಮರುಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಒತ್ತಾಯಿಸಿದ್ದಾರೆ.</p><p>ಯುಬಿಟಿಯ ಹಿರಿಯ ನಾಯಕರೊಂದಿಗೆ ಮೌರಿಸ್ ನಿಕಟ ಸಂಪರ್ಕ ಹೊಂದಿದ್ದ ಎಂದಿರುವ ಸಚಿವರು, ಮೌರಿಸ್ ಮತ್ತು ಯುಬಿಟಿಯ ನಾಯಕರು ಜೊತೆಗಿರುವ ಚಿತ್ರಗಳು ಶಿವಸೇನಾದ ಮುಖವಾಣಿ 'ಸಾಮ್ನಾ'ದಲ್ಲಿ ಪ್ರಕಟವಾಗಿರುವುದನ್ನು ಪ್ರದರ್ಶಿಸಿದರು.</p>.ಫೇಸ್ಬುಕ್ ಲೈವ್ನಲ್ಲೇ ಉದ್ಧವ್ ಠಾಕ್ರೆ ಗುಂಪಿನ ಮುಖಂಡನ ಗುಂಡಿಕ್ಕಿ ಹತ್ಯೆ.<p>ಮೌರಿಸ್ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು ಭೇಟಿಯಾಗಿದ್ದ ಎಂದು ಯುಬಿಟಿ ನಾಯಕ ಸಂಜಯ್ ರಾವುತ್ ಆರೋಪಿಸಿರುವುದಕ್ಕೆ ತಿರುಗೇಟು ನೀಡಿರುವ ಸಾಮಂತ್, ಇದು 'ಕಿಡಿಗೇಡಿತನದ ಹೇಳಿಕೆ' ಎಂದು ವಾಗ್ದಾಳಿ ನಡೆಸಿದ್ದಾರೆ.</p><p>ಅಭಿಷೇಕ್ ಹಾಗೂ ಮೌರಿಸ್ ನಡುವಣ ಸಂಭಾಷಣೆಯನ್ನು ಉಲ್ಲೇಖಿಸಿದ ಸಾಮಂತ್, ಯುಬಿಟಿಯ ಇಬ್ಬರು ನಾಯಕರು ಯೋಜನೆಗಳನ್ನು ರೂಪಿಸುತ್ತಿರುವ ಸಂದರ್ಭದಲ್ಲಿ, ಶಿವಸೇನೆಯ ಪಾತ್ರ ಏನಿರುತ್ತದೆ? ಎಂದು ಪ್ರಶ್ನಿಸಿದ್ದಾರೆ.</p><p>ಹತ್ಯೆ ಸಂಬಂಧ ಸಮಗ್ರ ತನಿಖೆ ನಡೆಸಲಾಗುವುದು ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>