<p><strong>ರಾಂಚಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಹೊಸದಾಗಿ ಸಮನ್ಸ್ ನೀಡಿದ ಬೆನ್ನಲ್ಲೇ, ಅವರು ದೆಹಲಿಗೆ ಶನಿವಾರ ರಾತ್ರಿ ತೆರಳಿದ್ದಾರೆ. ಅವರ ದೆಹಲಿ ಭೇಟಿಯು ಪೂರ್ವನಿರ್ಧರಿತವಲ್ಲದ ಕಾರಣ ಈ ನಡೆಯು ಸಂಶಯಗಳಿಗೆ ಎಡೆಮಾಡಿದೆ.</p>.<p>ಜನವರಿ 29 ಅಥವಾ 31ರಂದು ವಿಚಾರಣೆಗೆ ಹಾಜರಾಗಲು ಹೇಮಂತ್ ಅವರ ಲಭ್ಯತೆ ಕುರಿತು ಇ.ಡಿ ಪ್ರಶ್ನಿಸಿತ್ತು.</p>.<p>ಕಾನೂನು ಸಲಹೆಗಳನ್ನು ಪಡೆಯಲು ಅವರು ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಮುಖ್ಯಮಂತ್ರಿ ಕಚೇರಿ ಯಾವುದೇ ಮಾಹಿತಿ ನೀಡಿಲ್ಲ.</p>.<p>‘ಇ.ಡಿಯಿಂದ ಸಮನ್ಸ್ ಬಂದ ಬಳಿಕ ಹೇಮಂತ್ ಹಠಾತ್ ಆಗಿ ಅವರು ದೆಹಲಿಗೆ ದೌಡಾಯಿಸಿದರು. ಜ. 29ರಿಂದ 31ರ ವರೆಗೆ ಜಾರ್ಖಂಡ್ನ ವಿವಿಧ ಸ್ಥಳಗಳಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಬೇಕಿತ್ತು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಭೂ ಹಗರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ (ಪಿಎಂಎಲ್ಎ) ಹೇಮಂತ್ ಸೊರೇನ್ ಅವರ ಹೇಳಿಕೆಯನ್ನು ಜನವರಿ 20ರಂದು ದಾಖಲಿಸಿಕೊಂಡಿದ್ದರು. ವಿಚಾರಣೆ ಸಂಪೂರ್ಣವಾಗದ ಕಾರಣ ಮತ್ತೆ ಸಮನ್ಸ್ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಹೊಸದಾಗಿ ಸಮನ್ಸ್ ನೀಡಿದ ಬೆನ್ನಲ್ಲೇ, ಅವರು ದೆಹಲಿಗೆ ಶನಿವಾರ ರಾತ್ರಿ ತೆರಳಿದ್ದಾರೆ. ಅವರ ದೆಹಲಿ ಭೇಟಿಯು ಪೂರ್ವನಿರ್ಧರಿತವಲ್ಲದ ಕಾರಣ ಈ ನಡೆಯು ಸಂಶಯಗಳಿಗೆ ಎಡೆಮಾಡಿದೆ.</p>.<p>ಜನವರಿ 29 ಅಥವಾ 31ರಂದು ವಿಚಾರಣೆಗೆ ಹಾಜರಾಗಲು ಹೇಮಂತ್ ಅವರ ಲಭ್ಯತೆ ಕುರಿತು ಇ.ಡಿ ಪ್ರಶ್ನಿಸಿತ್ತು.</p>.<p>ಕಾನೂನು ಸಲಹೆಗಳನ್ನು ಪಡೆಯಲು ಅವರು ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಮುಖ್ಯಮಂತ್ರಿ ಕಚೇರಿ ಯಾವುದೇ ಮಾಹಿತಿ ನೀಡಿಲ್ಲ.</p>.<p>‘ಇ.ಡಿಯಿಂದ ಸಮನ್ಸ್ ಬಂದ ಬಳಿಕ ಹೇಮಂತ್ ಹಠಾತ್ ಆಗಿ ಅವರು ದೆಹಲಿಗೆ ದೌಡಾಯಿಸಿದರು. ಜ. 29ರಿಂದ 31ರ ವರೆಗೆ ಜಾರ್ಖಂಡ್ನ ವಿವಿಧ ಸ್ಥಳಗಳಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಬೇಕಿತ್ತು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಭೂ ಹಗರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ (ಪಿಎಂಎಲ್ಎ) ಹೇಮಂತ್ ಸೊರೇನ್ ಅವರ ಹೇಳಿಕೆಯನ್ನು ಜನವರಿ 20ರಂದು ದಾಖಲಿಸಿಕೊಂಡಿದ್ದರು. ವಿಚಾರಣೆ ಸಂಪೂರ್ಣವಾಗದ ಕಾರಣ ಮತ್ತೆ ಸಮನ್ಸ್ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>