<p><strong>ಲಖನೌ</strong>: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಾಳೆ ನಡೆಯಲಿರುವ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಅಖಿಲೇಶ್ ಯಾದವ್ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ(ಎಸ್ಪಿ) ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ</p><p>ಪಂಚ ರಾಜ್ಯಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಬೆನ್ನಲ್ಲೇ ಲೋಕಸಭಾ ಚುನಾವಣೆಯ ಸಿದ್ಥತೆ ಬಗ್ಗೆ ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 6ರಂದು ಮೈತ್ರಿಕೂಟದ ಸಭೆ ಕರೆದಿದ್ದಾರೆ.</p><p>‘ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವ ಕುರಿತಂತೆ ಯಾವುದೇ ಯೋಜನೆಗಳನ್ನು ಅಖಿಲೇಶ್ ಯಾದವ್ ಹೊಂದಿಲ್ಲ. ಪ್ರೊ. ರಾಮ್ ಗೋಪಾಲ್ ಯಾದವ್ ಅವರು ಭಾಗವಹಿಸುವ ಸಾಧ್ಯತೆಯಿದೆ. ಇಲ್ಲವೇ ಪಕ್ಷದ ಇತರ ನಾಯಕರು ಭಾಗವಹಿಸಬಹುದು’ ಎಂದು ಚೌಧರಿ ತಿಳಿಸಿದ್ದಾರೆ.</p><p>ಕಾಂಗ್ರೆಸ್ ಪರಾಭವದ ಬೆನ್ನಲ್ಲೇ ಬಿಜೆಪಿಯಂತಹ ದೊಡ್ಡ ಪಕ್ಷ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಸಾಕಷ್ಟು ಸಿದ್ಧತೆಗಳನ್ನು ಮಾಡಬೇಕಾಗುತ್ತದೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಾಳೆ ನಡೆಯಲಿರುವ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಅಖಿಲೇಶ್ ಯಾದವ್ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ(ಎಸ್ಪಿ) ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ</p><p>ಪಂಚ ರಾಜ್ಯಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಬೆನ್ನಲ್ಲೇ ಲೋಕಸಭಾ ಚುನಾವಣೆಯ ಸಿದ್ಥತೆ ಬಗ್ಗೆ ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 6ರಂದು ಮೈತ್ರಿಕೂಟದ ಸಭೆ ಕರೆದಿದ್ದಾರೆ.</p><p>‘ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವ ಕುರಿತಂತೆ ಯಾವುದೇ ಯೋಜನೆಗಳನ್ನು ಅಖಿಲೇಶ್ ಯಾದವ್ ಹೊಂದಿಲ್ಲ. ಪ್ರೊ. ರಾಮ್ ಗೋಪಾಲ್ ಯಾದವ್ ಅವರು ಭಾಗವಹಿಸುವ ಸಾಧ್ಯತೆಯಿದೆ. ಇಲ್ಲವೇ ಪಕ್ಷದ ಇತರ ನಾಯಕರು ಭಾಗವಹಿಸಬಹುದು’ ಎಂದು ಚೌಧರಿ ತಿಳಿಸಿದ್ದಾರೆ.</p><p>ಕಾಂಗ್ರೆಸ್ ಪರಾಭವದ ಬೆನ್ನಲ್ಲೇ ಬಿಜೆಪಿಯಂತಹ ದೊಡ್ಡ ಪಕ್ಷ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಸಾಕಷ್ಟು ಸಿದ್ಧತೆಗಳನ್ನು ಮಾಡಬೇಕಾಗುತ್ತದೆ ಎಂದು ಅಖಿಲೇಶ್ ಯಾದವ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>