<p><strong>ಮುಂಬೈ:</strong> ಗುಂಡಿನ ದಾಳಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವುದು ಅಧಿಕಾರದ ದುರ್ಬಳಕೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗಿನ ಎನ್ಸಿಪಿ ಶಾಸಕರಾಗಿದ್ದ ಅನಿಲ್ ದೇಶಮುಖ್ ಮತ್ತು ನವಾಬ್ ಮಲ್ಲಿಕ್ ಅವರಿಗೆ ಮತದಾನ ಮಾಡಲು ಅವಕಾಶ ನೀಡಿರಲಿಲ್ಲ. ಆ ಸಂದರ್ಭದಲ್ಲಿ ಅವರಿಬ್ಬರೂ ಜೈಲಿನಲ್ಲಿದ್ದರು. ಆದರೆ, ಗಾಯಕ್ವಾಡ್ ಮತ ಹಾಕಲು ಜೈಲಿನಿಂದ ಹೊರಬರಬಹುದಾಗಿದೆ. ಇದು ಅಧಿಕಾರದ ಬಳಕೆಯೋ ಅಥವಾ ದುರ್ಬಳಕೆಯೋ’ ಎಂದು ಪ್ರಶ್ನಿಸಿದ್ದಾರೆ.</p><p>ವಿರೋಧ ಪಕ್ಷಗಳಿಗೆ ಜನ ಬೆಂಬಲವಿದೆ ಎಂಬುವುದನ್ನು ಇತ್ತೀಚಿನ ಲೋಕಸಭಾ ಚುನಾವಣೆಯ ಫಲಿತಾಂಶ ತೋರಿಸಿದೆ ಎಂದು ರಾವುತ್ ಹೇಳಿದ್ದಾರೆ.</p><p>ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತರಾಗಿರುವ ಗಾಯಕ್ವಾಡ್ ಅವರಿಗೆ ಮತ ಹಾಕಲು ಅವಕಾಶ ನೀಡಬಾರದೆಂದು ಚುನಾವಣಾಧಿಕಾರಿಯನ್ನು ಕಾಂಗ್ರೆಸ್ ಒತ್ತಾಯಿಸಿದೆ.</p><p>ಭೂ ವಿವಾದಕ್ಕೆ ಸಂಬಂಧಿಸಿದಂತೆ ಥಾಣೆ ಜಿಲ್ಲೆಯ ಉಲ್ಲಾಸ್ ನಗರದ ಪೊಲೀಸ್ ಠಾಣೆಯಲ್ಲಿಯೇ ಶಿವಸೇನಾ (ಶಿಂದೆ ಬಣ) ನಾಯಕರಿಬ್ಬರಿಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರನ್ನು ಪೊಲೀಸರು ಫೆಬ್ರುವರಿಯಲ್ಲಿ ಬಂಧಿಸಿದ್ದರು. ಸದ್ಯ ಗಾಯಕ್ವಾಡ್ ನ್ಯಾಯಾಂಗ ಬಂಧನದಲ್ಲಿದ್ದಾರೆ.</p><p>ಮಹಾರಾಷ್ಟ್ರ ವಿಧಾನ ಪರಿಷತ್ನ 11 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯು ಇಂದು (ಶುಕ್ರವಾರ) ದಕ್ಷಿಣ ಮುಂಬೈನ ವಿಧಾನ ಭವನ ಸಂಕೀರ್ಣದಲ್ಲಿ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಗುಂಡಿನ ದಾಳಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡುವುದು ಅಧಿಕಾರದ ದುರ್ಬಳಕೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗಿನ ಎನ್ಸಿಪಿ ಶಾಸಕರಾಗಿದ್ದ ಅನಿಲ್ ದೇಶಮುಖ್ ಮತ್ತು ನವಾಬ್ ಮಲ್ಲಿಕ್ ಅವರಿಗೆ ಮತದಾನ ಮಾಡಲು ಅವಕಾಶ ನೀಡಿರಲಿಲ್ಲ. ಆ ಸಂದರ್ಭದಲ್ಲಿ ಅವರಿಬ್ಬರೂ ಜೈಲಿನಲ್ಲಿದ್ದರು. ಆದರೆ, ಗಾಯಕ್ವಾಡ್ ಮತ ಹಾಕಲು ಜೈಲಿನಿಂದ ಹೊರಬರಬಹುದಾಗಿದೆ. ಇದು ಅಧಿಕಾರದ ಬಳಕೆಯೋ ಅಥವಾ ದುರ್ಬಳಕೆಯೋ’ ಎಂದು ಪ್ರಶ್ನಿಸಿದ್ದಾರೆ.</p><p>ವಿರೋಧ ಪಕ್ಷಗಳಿಗೆ ಜನ ಬೆಂಬಲವಿದೆ ಎಂಬುವುದನ್ನು ಇತ್ತೀಚಿನ ಲೋಕಸಭಾ ಚುನಾವಣೆಯ ಫಲಿತಾಂಶ ತೋರಿಸಿದೆ ಎಂದು ರಾವುತ್ ಹೇಳಿದ್ದಾರೆ.</p><p>ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತರಾಗಿರುವ ಗಾಯಕ್ವಾಡ್ ಅವರಿಗೆ ಮತ ಹಾಕಲು ಅವಕಾಶ ನೀಡಬಾರದೆಂದು ಚುನಾವಣಾಧಿಕಾರಿಯನ್ನು ಕಾಂಗ್ರೆಸ್ ಒತ್ತಾಯಿಸಿದೆ.</p><p>ಭೂ ವಿವಾದಕ್ಕೆ ಸಂಬಂಧಿಸಿದಂತೆ ಥಾಣೆ ಜಿಲ್ಲೆಯ ಉಲ್ಲಾಸ್ ನಗರದ ಪೊಲೀಸ್ ಠಾಣೆಯಲ್ಲಿಯೇ ಶಿವಸೇನಾ (ಶಿಂದೆ ಬಣ) ನಾಯಕರಿಬ್ಬರಿಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರನ್ನು ಪೊಲೀಸರು ಫೆಬ್ರುವರಿಯಲ್ಲಿ ಬಂಧಿಸಿದ್ದರು. ಸದ್ಯ ಗಾಯಕ್ವಾಡ್ ನ್ಯಾಯಾಂಗ ಬಂಧನದಲ್ಲಿದ್ದಾರೆ.</p><p>ಮಹಾರಾಷ್ಟ್ರ ವಿಧಾನ ಪರಿಷತ್ನ 11 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯು ಇಂದು (ಶುಕ್ರವಾರ) ದಕ್ಷಿಣ ಮುಂಬೈನ ವಿಧಾನ ಭವನ ಸಂಕೀರ್ಣದಲ್ಲಿ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>