ದೇವರ ದರ್ಶನದ ನಂತರ ಪವನ್ ಅವರು ಅನ್ನದಾನ ಕೇಂದ್ರದಲ್ಲಿ ಪ್ರಸಾದ ಸೇವಿಸಿದರು. ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು, ಕಲ್ಯಾಣ್ ಅವರ ಕಿರಿಯ ಪುತ್ರಿ ಪಲೀನಾ ಅಂಜನಿ ಕೊನಿಡೇಲಾ ಅವರು ತಿರುಮಲ ದೇವಸ್ಥಾನದ ವೆಂಕಟೇಶ್ವರನ ಮೇಲೆ ನಂಬಿಕೆಯಿರುವುದಾಗಿ ಘೋಷಣೆ ಮಾಡಿದರು. ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ನಿಯಮದ ಪ್ರಕಾರ, ಹಿಂದೂಯೇತರರು ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು ದೇವರಲ್ಲಿ ತಮ್ಮ ನಂಬಿಕೆಯನ್ನು ಘೋಷಿಸಬೇಕು. ಟಿಟಿಡಿ ಸಿಬ್ಬಂದಿ ನೀಡಿದ ದಾಖಲೆಗಳಿಗೆ ಪಲೀನಾ ಸಹಿ ಹಾಕಿದ್ದಾರೆ. ಪಲೀನಾ ಅಂಜನಿ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ಪವನ್ ಕಲ್ಯಾಣ್ ದಾಖಲೆಗಳನ್ನು ಅನುಮೋದಿಸಿದರು ಎಂದು ಪ್ರಕಟಣೆ ತಿಳಿಸಿದೆ.