<p><strong>ಕಾಕಿನಾಡ</strong> (ಆಂಧ್ರಪ್ರದೇಶ): ಸಾಮಾಜಿಕ ಭದ್ರತಾ ಪಿಂಚಣೆ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮಾಸಿಕವಾಗಿ ₹ 3 ಸಾವಿರ ನೀಡುವ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಬುಧವಾರ ಚಾಲನೆ ನೀಡಿದ್ದಾರೆ.</p><p>ಕಾಕಿನಾಡದ ರಂಗರಾಯ ಮೆಡಿಕಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವೃದ್ಧರು, ವಿಧವೆಯರು ಸೇರಿದಂತೆ ಇತರರಿಗೆ ಈ ಯೋಜನೆಯಿಂದಾಗಿ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.</p><p>ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಈವರೆಗೂ ನೀಡಲಾಗುತ್ತಿದ್ದ ಮಾಸಿಕ ₹2,750 ಅನ್ನು ₹ 3 ಸಾವಿರಕ್ಕೆ ಹೆಚ್ಚಿಸಲು ಆಂಧ್ರಪ್ರದೇಶ ಸಚಿವ ಸಂಪುಟ ಇತ್ತೀಚೆಗೆ ನಿರ್ಧರಿಸಿತ್ತು.</p><p>ಈ ಯೋಜನೆಯಿಂದ 66 ಲಕ್ಷ ಜನರಿಗೆ ಸಹಾಯವಾಗಲಿದೆ. ಈ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರದ ಅವಧಿಯಲ್ಲಿ ಕೇವಲ ₹1 ಸಾವಿರ ನೀಡಲಾಗುತ್ತಿತ್ತು ಎಂದು ಜಗನ್ ತಿಳಿಸಿದ್ದಾರೆ.</p><p>ವೈಎಸ್ಆರ್ ಪಿಂಚಣಿ ಕಾಣುಕ ಎಂಬ ಈ ಯೋಜನೆಯಡಿ ಹಿರಿಯ ನಾಗರಿಕರು, ವಿಧವೆಯರು, ಒಂಟಿ ಮಹಿಳೆಯರು, ಎಚ್ಐವಿ ಪೀಡಿತರು ಸೇರಿದಂತೆ ಇತರರು ಫಲಾನುಭವಿಗಳಾಗಿರುತ್ತಾರೆ.</p><p>ಬಡವರಿಗೆ 22 ಲಕ್ಷ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ ಆದರೆ ವಿರೋಧ ಪಕ್ಷಗಳು ಇದರಲ್ಲೂ ಭ್ರಷ್ಟಚಾರವಾಗಿದೆ ಎಂದು ಆರೋಪಿಸುತ್ತಾರೆ ಎಂದು ಜಗನ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಕಿನಾಡ</strong> (ಆಂಧ್ರಪ್ರದೇಶ): ಸಾಮಾಜಿಕ ಭದ್ರತಾ ಪಿಂಚಣೆ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮಾಸಿಕವಾಗಿ ₹ 3 ಸಾವಿರ ನೀಡುವ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಬುಧವಾರ ಚಾಲನೆ ನೀಡಿದ್ದಾರೆ.</p><p>ಕಾಕಿನಾಡದ ರಂಗರಾಯ ಮೆಡಿಕಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವೃದ್ಧರು, ವಿಧವೆಯರು ಸೇರಿದಂತೆ ಇತರರಿಗೆ ಈ ಯೋಜನೆಯಿಂದಾಗಿ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.</p><p>ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ಈವರೆಗೂ ನೀಡಲಾಗುತ್ತಿದ್ದ ಮಾಸಿಕ ₹2,750 ಅನ್ನು ₹ 3 ಸಾವಿರಕ್ಕೆ ಹೆಚ್ಚಿಸಲು ಆಂಧ್ರಪ್ರದೇಶ ಸಚಿವ ಸಂಪುಟ ಇತ್ತೀಚೆಗೆ ನಿರ್ಧರಿಸಿತ್ತು.</p><p>ಈ ಯೋಜನೆಯಿಂದ 66 ಲಕ್ಷ ಜನರಿಗೆ ಸಹಾಯವಾಗಲಿದೆ. ಈ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರದ ಅವಧಿಯಲ್ಲಿ ಕೇವಲ ₹1 ಸಾವಿರ ನೀಡಲಾಗುತ್ತಿತ್ತು ಎಂದು ಜಗನ್ ತಿಳಿಸಿದ್ದಾರೆ.</p><p>ವೈಎಸ್ಆರ್ ಪಿಂಚಣಿ ಕಾಣುಕ ಎಂಬ ಈ ಯೋಜನೆಯಡಿ ಹಿರಿಯ ನಾಗರಿಕರು, ವಿಧವೆಯರು, ಒಂಟಿ ಮಹಿಳೆಯರು, ಎಚ್ಐವಿ ಪೀಡಿತರು ಸೇರಿದಂತೆ ಇತರರು ಫಲಾನುಭವಿಗಳಾಗಿರುತ್ತಾರೆ.</p><p>ಬಡವರಿಗೆ 22 ಲಕ್ಷ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ ಆದರೆ ವಿರೋಧ ಪಕ್ಷಗಳು ಇದರಲ್ಲೂ ಭ್ರಷ್ಟಚಾರವಾಗಿದೆ ಎಂದು ಆರೋಪಿಸುತ್ತಾರೆ ಎಂದು ಜಗನ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>