ಗಡಿ ಭಾಗದಲ್ಲಿ ಒಳನುಸುಳುವಿಕೆ ಹಾಗೂ ಭಯೋತ್ಪಾದನಾ ನಿಗ್ರಹ ಕಾರ್ಯಪಡೆ ಜತೆ ಮಾತುಕತೆ ನಡೆಸಿದರು. ಕಾರ್ಯಪಡೆಗಳ ಕಾರ್ಯಚಟುವಟಿಕೆಯನ್ನೂ ಪರಿಶೀಲಿಸಿದರು. ನಾಳೆ ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಆಚರಣೆಯಲ್ಲಿ ಪಾಲ್ಗೊಳ್ಳಲು ಕಾರ್ಗಿಲ್ಗೆ ತೆರಳಿದರು ಎಂದು ತಿಳಿದು ಬಂದಿದೆ.
ಭೇಟಿ ವೇಳೆ ಜನರಲ್ ದ್ವಿವೇದಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಜತೆಗೆ ಇದ್ದರು . ಈ ವೇಳೆ ಕುಪ್ವಾರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ದಿಲಾವರ್ ಖಾನ್ ಅವರಿಗೆ ಗೌರವ ನಮನ ಸಲ್ಲಿಸಿದರು.