<p><strong>ನವದೆಹಲಿ:</strong> ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಬಂಧಿತರಾಗಿರುವ, ‘ನ್ಯೂಸ್ಕ್ಲಿಕ್’ ಸುದ್ದಿ ಪೋರ್ಟಲ್ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ, ಅನಿರೀಕ್ಷಿತ ಬೆಳವಣಿಗೆಯಲ್ಲಿ ತಪ್ಪೊಪ್ಪಿಕೊಂಡಿದ್ದು ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷ್ಯ ಹೇಳುವುದಾಗಿ ದೆಹಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಚೀನಾ ಪರವಾಗಿ ಪ್ರಚಾರ ಕೈಗೊಳ್ಳಲು ಪೋರ್ಟಲ್ ಹಣ ಪಡೆದಿದೆ ಎಂಬ ಆರೋಪದ ಸಂಬಂಧ ಅಮಿತ್ ಅವರನ್ನು ಬಂಧಿಸಲಾಗಿದೆ. ಇವರು ಕಳೆದ ವಾರ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಹರ್ದೀಪ್ ಕೌರ್ ಅವರ ಎದುರು ಅರ್ಜಿ ಸಲ್ಲಿಸಿದ್ದಾರೆ.</p>.<p>ಉಲ್ಲೇಖಿತ ಪ್ರಕರಣದಲ್ಲಿ ಕ್ಷಮೆ ಕೋರಿರುವ ಆರೋಪಿ, ತನ್ನ ಬಳಿ ಸಾಂದರ್ಭಿಕ ಸಾಕ್ಷ್ಯಗಳಿದ್ದು, ಇವುಗಳನ್ನು ತನಿಖೆ ಕೈಗೊಂಡಿರುವ ದೆಹಲಿ ಪೊಲೀಸರ ಎದುರು ಬಹಿರಂಗಪಡಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಅಮಿತ್ ಅವರ ಹೇಳಿಕೆ ದಾಖಲಿಸಲು ಈ ಪ್ರಕರಣವನ್ನು ನ್ಯಾಯಾಧೀಶರು ಮ್ಯಾಜಿಸ್ಟ್ರಿಯಲ್ ಕೋರ್ಟ್ಗೆ ವರ್ಗಾಯಿಸಿದ್ದಾರೆ.</p>.<p>ಅರೋಪಿಯ ಅರ್ಜಿಯನ್ನು ಪರಿಶೀಲಿಸಿದ ಬಳಿಕವೇ ಕೋರ್ಟ್ನಲ್ಲಿ ಇದನ್ನು ಬೆಂಬಲಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅಮಿತ್ ಮತ್ತು ಸುದ್ದಿ ಪೋರ್ಟಲ್ನ ಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರನ್ನು ಅಕ್ಟೋಬರ್ 3ರಂದು ದೆಹಲಿ ಪೊಲೀಸ್ ವಿಶೇಷ ಘಟಕದ ಸಿಬ್ಬಂದಿ ಬಂಧಿಸಿದ್ದರು. ಈ ಇಬ್ಬರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಬಂಧಿತರಾಗಿರುವ, ‘ನ್ಯೂಸ್ಕ್ಲಿಕ್’ ಸುದ್ದಿ ಪೋರ್ಟಲ್ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ, ಅನಿರೀಕ್ಷಿತ ಬೆಳವಣಿಗೆಯಲ್ಲಿ ತಪ್ಪೊಪ್ಪಿಕೊಂಡಿದ್ದು ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷ್ಯ ಹೇಳುವುದಾಗಿ ದೆಹಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಚೀನಾ ಪರವಾಗಿ ಪ್ರಚಾರ ಕೈಗೊಳ್ಳಲು ಪೋರ್ಟಲ್ ಹಣ ಪಡೆದಿದೆ ಎಂಬ ಆರೋಪದ ಸಂಬಂಧ ಅಮಿತ್ ಅವರನ್ನು ಬಂಧಿಸಲಾಗಿದೆ. ಇವರು ಕಳೆದ ವಾರ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಹರ್ದೀಪ್ ಕೌರ್ ಅವರ ಎದುರು ಅರ್ಜಿ ಸಲ್ಲಿಸಿದ್ದಾರೆ.</p>.<p>ಉಲ್ಲೇಖಿತ ಪ್ರಕರಣದಲ್ಲಿ ಕ್ಷಮೆ ಕೋರಿರುವ ಆರೋಪಿ, ತನ್ನ ಬಳಿ ಸಾಂದರ್ಭಿಕ ಸಾಕ್ಷ್ಯಗಳಿದ್ದು, ಇವುಗಳನ್ನು ತನಿಖೆ ಕೈಗೊಂಡಿರುವ ದೆಹಲಿ ಪೊಲೀಸರ ಎದುರು ಬಹಿರಂಗಪಡಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಅಮಿತ್ ಅವರ ಹೇಳಿಕೆ ದಾಖಲಿಸಲು ಈ ಪ್ರಕರಣವನ್ನು ನ್ಯಾಯಾಧೀಶರು ಮ್ಯಾಜಿಸ್ಟ್ರಿಯಲ್ ಕೋರ್ಟ್ಗೆ ವರ್ಗಾಯಿಸಿದ್ದಾರೆ.</p>.<p>ಅರೋಪಿಯ ಅರ್ಜಿಯನ್ನು ಪರಿಶೀಲಿಸಿದ ಬಳಿಕವೇ ಕೋರ್ಟ್ನಲ್ಲಿ ಇದನ್ನು ಬೆಂಬಲಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಅಮಿತ್ ಮತ್ತು ಸುದ್ದಿ ಪೋರ್ಟಲ್ನ ಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರನ್ನು ಅಕ್ಟೋಬರ್ 3ರಂದು ದೆಹಲಿ ಪೊಲೀಸ್ ವಿಶೇಷ ಘಟಕದ ಸಿಬ್ಬಂದಿ ಬಂಧಿಸಿದ್ದರು. ಈ ಇಬ್ಬರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>