ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಇ.ಡಿ ಹಾಗೂ ಸಿಬಿಐನಿಂದ ಬಂಧಿನಕ್ಕೊಳಗಾಗಿದ್ದ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿನಿಂದ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಮುಂದಿನ ಚುನಾವಣೆಯಲ್ಲಿ ಮತದಾರರಿಂದ ‘ಪ್ರಾಮಾಣಿಕತೆಯ ಸರ್ಟಿಫಿಕೆಟ್’ ಸಿಗುವವರೆಗೂ ಮುಖ್ಯಮಂತ್ರಿ ಸ್ಥಾನ ಏರುವುದಿಲ್ಲ ಎಂದು ಹೇಳಿದ್ದರು.
ನವರಾತ್ರಿ ವೇಳೆಯಲ್ಲಿ ಮುಖ್ಯಮಂತ್ರಿ ನಿವಾಸವನ್ನು ತೊರೆಯುವುದಾಗಿ ಹೇಳಿದ್ದರು. ಗುರುವಾರದಿಂದ ನವರಾತ್ರಿ ಆಚರಣೆ ಆರಂಭವಾಗಿದೆ.