<p><strong>ಗುವಾಹಟಿ:</strong> ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮುಂದುವರಿದಿದೆ. 10 ಜಿಲ್ಲೆಗಳಲ್ಲಿ ಆರು ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. </p><p>ರೀಮಲ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಯಿತು. ಅನೇಕ ಪ್ರದೇಶಗಳಲ್ಲಿ ಪ್ರವಾಹಪೀಡಿತ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದ್ದಾರೆ. </p><p>ಕೊಪಿಲಿ, ಬರಾಕ್, ಕುಶಿಯಾರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. </p><p>ಹೈಲಕಂಡಿ ಹೊಜೈ, ಮೊರಿಗಾಂವ್, ಕರೀಂಗಂಜ್, ನಾಗಾಂವ್, ಕಾಚಾರ್, ದಿಬ್ರುಗಢ, ಗೋಲಾಘಾಟ್, ಕರ್ಬಿ ಆಂಗ್ಲೋಂಗ್ ಮತ್ತು ದಿಮಾ ಹಸಾಒ ಜಿಲ್ಲೆಗಳಲ್ಲಿ ಒಟ್ಟು 6,01,642 ಜನರು ಪ್ರವಾಹದಿಂದಾಗಿ ತೊಂದರೆಗೀಡಾಗಿದ್ದಾರೆ. </p><p>ಮೇ 28ರಿಂದ ಪ್ರವಾಹ ಹಾಗೂ ಚಂಡಮಾರುತದಿಂದಾಗಿ ಮೃತಪಟ್ಟವರ ಸಂಖ್ಯೆ 15 ಆಗಿದೆ ಎಂದು ಅವರು ತಿಳಿಸಿದ್ದಾರೆ. ಹಲವು ಕಡೆಗಳಲ್ಲಿ ರಸ್ತೆ ಹಾಗೂ ರೈಲು ಸಂಪರ್ಕ ಕಡಿದುಕೊಂಡಿದೆ.</p><p>ನಾಗಾಂವ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, 2.79 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ. ಹೊಜೈಯಲ್ಲಿ 1.26 ಲಕ್ಷ ಮತ್ತು ಕಾಚಾರ್ನಲ್ಲಿ 1.12 ಲಕ್ಷ ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. </p><p>ವಿವಿಧ ಜಿಲ್ಲೆಗಳಲ್ಲಿ 40,000ಕ್ಕೂ ಹೆಚ್ಚು ಮಂದಿ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸ್ಥಳೀಯಾಡಳಿತ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. </p>.ಅಸ್ಸಾಂ ಪ್ರವಾಹ: ಸಂಕಷ್ಟದಲ್ಲಿ 2.70 ಲಕ್ಷಕ್ಕೂ ಹೆಚ್ಚು ಜನ, ಅಮಿತ್ ಶಾ ನೆರವಿನ ಭರವಸೆ.‘ರೀಮಲ್’ ಚಂಡಮಾರುತ: ಪ.ಬಂಗಾಳದಲ್ಲಿ 1 ಲಕ್ಷ,ಬಾಂಗ್ಲಾದಲ್ಲಿ 8 ಲಕ್ಷ ಜನರ ಸ್ಥಳಾಂತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮುಂದುವರಿದಿದೆ. 10 ಜಿಲ್ಲೆಗಳಲ್ಲಿ ಆರು ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. </p><p>ರೀಮಲ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಯಿತು. ಅನೇಕ ಪ್ರದೇಶಗಳಲ್ಲಿ ಪ್ರವಾಹಪೀಡಿತ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದ್ದಾರೆ. </p><p>ಕೊಪಿಲಿ, ಬರಾಕ್, ಕುಶಿಯಾರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. </p><p>ಹೈಲಕಂಡಿ ಹೊಜೈ, ಮೊರಿಗಾಂವ್, ಕರೀಂಗಂಜ್, ನಾಗಾಂವ್, ಕಾಚಾರ್, ದಿಬ್ರುಗಢ, ಗೋಲಾಘಾಟ್, ಕರ್ಬಿ ಆಂಗ್ಲೋಂಗ್ ಮತ್ತು ದಿಮಾ ಹಸಾಒ ಜಿಲ್ಲೆಗಳಲ್ಲಿ ಒಟ್ಟು 6,01,642 ಜನರು ಪ್ರವಾಹದಿಂದಾಗಿ ತೊಂದರೆಗೀಡಾಗಿದ್ದಾರೆ. </p><p>ಮೇ 28ರಿಂದ ಪ್ರವಾಹ ಹಾಗೂ ಚಂಡಮಾರುತದಿಂದಾಗಿ ಮೃತಪಟ್ಟವರ ಸಂಖ್ಯೆ 15 ಆಗಿದೆ ಎಂದು ಅವರು ತಿಳಿಸಿದ್ದಾರೆ. ಹಲವು ಕಡೆಗಳಲ್ಲಿ ರಸ್ತೆ ಹಾಗೂ ರೈಲು ಸಂಪರ್ಕ ಕಡಿದುಕೊಂಡಿದೆ.</p><p>ನಾಗಾಂವ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, 2.79 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ. ಹೊಜೈಯಲ್ಲಿ 1.26 ಲಕ್ಷ ಮತ್ತು ಕಾಚಾರ್ನಲ್ಲಿ 1.12 ಲಕ್ಷ ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. </p><p>ವಿವಿಧ ಜಿಲ್ಲೆಗಳಲ್ಲಿ 40,000ಕ್ಕೂ ಹೆಚ್ಚು ಮಂದಿ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸ್ಥಳೀಯಾಡಳಿತ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. </p>.ಅಸ್ಸಾಂ ಪ್ರವಾಹ: ಸಂಕಷ್ಟದಲ್ಲಿ 2.70 ಲಕ್ಷಕ್ಕೂ ಹೆಚ್ಚು ಜನ, ಅಮಿತ್ ಶಾ ನೆರವಿನ ಭರವಸೆ.‘ರೀಮಲ್’ ಚಂಡಮಾರುತ: ಪ.ಬಂಗಾಳದಲ್ಲಿ 1 ಲಕ್ಷ,ಬಾಂಗ್ಲಾದಲ್ಲಿ 8 ಲಕ್ಷ ಜನರ ಸ್ಥಳಾಂತರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>