ಈ ವರ್ಷ ಪ್ರವಾಹ, ಭೂಕುಸಿತ, ಬಿರುಗಾಳಿಗಳಲ್ಲಿ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
53,000ಕ್ಕೂ ಹೆಚ್ಚು ಜನರು 577 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶುಕ್ರವಾರ ಮತ್ತು ಶನಿವಾರ ದಿಬ್ರುಗಢ ಸೇರಿ ಹಲವು ಜಿಲ್ಲೆಗಳ ವಿವಿಧೆಡೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲಿಂದ ಹಿಂದಿರುಗಿದ ಬಳಿಕ ತಡರಾತ್ರಿ ಅವರು ಅಧಿಕಾರಿಗಳ ಜತೆ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದರು.