ಇಂದು ಸಂಜೆ ಕೇಜ್ರಿವಾಲ್ ಅವರು, ಲೆಫ್ಟಿನಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಕೇಜ್ರಿವಾಲ್ ಅವರ ಅನುಪಸ್ಥಿತಿಯಲ್ಲಿ ಬಹುತೇಕ ಇಲಾಖೆಗಳ ಉಸ್ತುವಾರಿ ಹೊಂದಿದ್ದ ಸಚಿವೆ ಆತಿಶಿ, ಕೇಜ್ರಿವಾಲ್ ಅವರ ನಿಷ್ಠರು ಎಂದೇ ಗುರುತಿಸಲಾಗಿದೆ.
ಇತ್ತೀಚೆಗೆ ದೆಹಲಿಗೆ ನೀರು ಬಿಡುವಂತೆ ಉಪವಾಸ ಸತ್ಯಾಗ್ರಹ ಮಾಡಿದ್ದರು. ಅಲ್ಲದೆ ಕೇಜ್ರಿವಾಲ್ ವಿರುದ್ಧದ ಆರೋಪಗಳನ್ನು ಖಂಡಿಸಿ ಪ್ರತಿಭಟನೆಯನ್ನೂ ನಡೆಸಿದ್ದರು. ಸ್ವಾತಂತ್ರ್ಯ ದಿನ ಸಮಾರಂಭದಲ್ಲಿ ಧ್ವಜಾರೋಹಣಕ್ಕೆ ಆತಿಶಿ ಹೆಸರನ್ನೇ ಕೇಜ್ರಿವಾಲ್ ಸೂಚಿಸಿದ್ದರು.