ಮೊಹಮ್ಮದ್ ಅಜರುದ್ದೀನ್
ಹೈದರಾಬಾದ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಗುರುವಾರ ಹಾಜರಾಗಲಿಲ್ಲ.
ಅಕ್ಟೋಬರ್ 3ರಂದು ಹಾಜರಾಗು ವಂತೆ ಅಜರುದ್ದೀನ್ ಅವರಿಗೆ ಇ.ಡಿ ನೋಟಿಸ್ ನೀಡಿತ್ತು. ‘ನನಗೆ ತನಿಖೆಗೆ ಹಾಜರಾಗಲು ಇನ್ನಷ್ಟು ಸಮಯ ಬೇಕು’ ಎಂದು ಅಜರುದ್ದೀನ್ ಅವರು ತನಿಖಾ ಸಂಸ್ಥೆಗೆ ಮನವಿ ಮಾಡಿದರು. ಆದ್ದರಿಂದ ಅಕ್ಟೋಬರ್ 8ರಂದು ವಿಚಾರಣೆಗೆ ಹಾಜರಾಗುವಂತೆ ಅಜರುದ್ದೀನ್ ಅವರಿಗೆ ಇ.ಡಿ ನೋಟಿಸ್ ನೀಡಿದೆ. ಅಜರುದ್ದೀನ್ ಅವರು ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಎನ್ನುವ ಆರೋಪದಲ್ಲಿ, ಕಳೆದ ವರ್ಷದ ನವೆಂಬರ್ನಲ್ಲಿ ತನಿಖಾ ಸಂಸ್ಥೆಯು ಕ್ರಿಕೆಟ್ ಸಂಸ್ಥೆ ಕಚೇರಿಯ ಮೇಲೆ ದಾಳಿ ನಡೆಸಿತ್ತು.