<p><strong>ಮುಂಬೈ:</strong> ಮಹಾರಾಷ್ಟ್ರದ ಮುಂಬೈ, ಕರಾವಳಿ ಕೊಂಕಣ ಪ್ರದೇಶ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಏಕನಾಥ ಶಿಂದೆ ಸೂಚಿಸಿದ್ದಾರೆ.</p>.<p>ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸ್ಥಳೀಯ ಆಡಳಿತ, ನಾಗರಿಕ ಸಂಸ್ಥೆಗಳು ಹಾಗೂ ಪೊಲೀಸರು ಭಾರತೀಯ ಹವಾಮಾನ ಇಲಾಖೆಯಿಂದ ಹವಾಮಾನದ ಕುರಿತು ನಿಯಮಿತವಾಗಿ ಮಾಹಿತಿ ಪಡೆದುಕೊಳ್ಳಬೇಕು. ಅದಕ್ಕನುಗುಣವಾಗಿ ಜನರಿಗೆ ರಕ್ಷಣೆ ಮತ್ತು ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ.</p><p>ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಬೇಕು, ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಅನುಸರಿಸಬೇಕು ಹಾಗೂ ಜಲಾವೃತ ಪ್ರದೇಶಗಳಲ್ಲಿ ಬದಲಿ ಸಂಚಾರ ಮಾರ್ಗ ಒದಗಿಸಬೇಕು. ಹವಾಮಾನ ಇಲಾಖೆ ನೀಡುವ ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕು ಎಂದು ಶಿಂದೆ ತಿಳಿಸಿದ್ದಾರೆ.</p><p>ಆಹಾರ, ಔಷಧಿ ಮತ್ತು ಪರಿಹಾರ ಸಾಮಾಗ್ರಿಗಳ ದಾಸ್ತಾನು ಸೂಕ್ತ ಪ್ರಮಾಣದಲ್ಲಿ ನಿರ್ವಹಿಸಬೇಕು, ಸಂತ್ರಸ್ತರು ಹಾಗೂ ಪ್ರಾಣಿಗಳಿಗೆ ತಾತ್ಕಾಲಿಕ ಆಶ್ರಯ ಶಿಬಿರಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಮುಂಬೈ, ಕರಾವಳಿ ಕೊಂಕಣ ಪ್ರದೇಶ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಏಕನಾಥ ಶಿಂದೆ ಸೂಚಿಸಿದ್ದಾರೆ.</p>.<p>ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸ್ಥಳೀಯ ಆಡಳಿತ, ನಾಗರಿಕ ಸಂಸ್ಥೆಗಳು ಹಾಗೂ ಪೊಲೀಸರು ಭಾರತೀಯ ಹವಾಮಾನ ಇಲಾಖೆಯಿಂದ ಹವಾಮಾನದ ಕುರಿತು ನಿಯಮಿತವಾಗಿ ಮಾಹಿತಿ ಪಡೆದುಕೊಳ್ಳಬೇಕು. ಅದಕ್ಕನುಗುಣವಾಗಿ ಜನರಿಗೆ ರಕ್ಷಣೆ ಮತ್ತು ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ.</p><p>ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಬೇಕು, ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಅನುಸರಿಸಬೇಕು ಹಾಗೂ ಜಲಾವೃತ ಪ್ರದೇಶಗಳಲ್ಲಿ ಬದಲಿ ಸಂಚಾರ ಮಾರ್ಗ ಒದಗಿಸಬೇಕು. ಹವಾಮಾನ ಇಲಾಖೆ ನೀಡುವ ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕು ಎಂದು ಶಿಂದೆ ತಿಳಿಸಿದ್ದಾರೆ.</p><p>ಆಹಾರ, ಔಷಧಿ ಮತ್ತು ಪರಿಹಾರ ಸಾಮಾಗ್ರಿಗಳ ದಾಸ್ತಾನು ಸೂಕ್ತ ಪ್ರಮಾಣದಲ್ಲಿ ನಿರ್ವಹಿಸಬೇಕು, ಸಂತ್ರಸ್ತರು ಹಾಗೂ ಪ್ರಾಣಿಗಳಿಗೆ ತಾತ್ಕಾಲಿಕ ಆಶ್ರಯ ಶಿಬಿರಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>