ಅಲ್ಲದೆ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣವೇ ಕೇಂದ್ರ ಹಣ ಬಿಡುಗಡೆಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
‘2009ರ ನಂತರ ದಾಮೋದರ ನದಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳು ಅತಿದೊಡ್ಡ ಪ್ರವಾಹಗಳನ್ನು ಎದುರಿಸುತ್ತಿವೆ. ಈ ವಿಷಯವನ್ನು ನೀವು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಬೇಕು’ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ವರ್ಷದಲ್ಲಿ 5.5 ಲಕ್ಷ ಕ್ಯೂಸೆಕ್ ನೀರನ್ನು ಡಿವಿಸಿ ಬಿಡುಗಡೆಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಅವರು ಆರೋಪಿಸಿದ್ದಾರೆ.