ಶನಿವಾರ, 28 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಗತ್‌ ಸಿಂಗ್‌ ಜನ್ಮದಿನ: ಪ್ರಧಾನಿ ಮೋದಿ, ರಾಹುಲ್‌ ಸೇರಿ ಗಣ್ಯರ ನಮನ

Published : 28 ಸೆಪ್ಟೆಂಬರ್ 2024, 4:47 IST
Last Updated : 28 ಸೆಪ್ಟೆಂಬರ್ 2024, 4:47 IST
ಫಾಲೋ ಮಾಡಿ
Comments

ನವದೆಹಲಿ: ಕ್ರಾಂತಿಕಾರಿ, ‌ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್‌ ಗಾಂಧಿ ಸೇರಿದಂತೆ ಗಣ್ಯರು ಶನಿವಾರ ಗೌರವ ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಭಗತ್ ಸಿಂಗ್ ಮಾತೃಭೂಮಿಗಾಗಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದರು. ಅವರ ತ್ಯಾಗ ಮತ್ತು ಬಲಿದಾನ ಸದಾ ನೆನಪಿನಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

‘ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ ತ್ಯಾಗ, ಧೈರ್ಯ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾದ್ದದ್ದು’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನದ ನಮಗಳು. ಸಮಾಜದಲ್ಲಿನ ವಿಭಜಕ ಶಕ್ತಿಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದರು. ಅಸಮಾನತೆಯ ವಿರುದ್ಧ ಧ್ವನಿ ಎತ್ತಿದ ಅವರ ಚಿಂತನೆಗಳು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗಿದೆ‘ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ಸ್ವಾತಂತ್ರ್ಯ ಚಳುವಳಿಯ ಅನರ್ಘ್ಯ ರತ್ನ, ಭಾರತ ಮಾತೆಯ ಹೆಮ್ಮೆಯ ಪುತ್ರ ಭಗತ್ ಸಿಂಗ್ ಅವರ ಧೈರ್ಯ, ಶೌರ್ಯ, ಸಾಹಸ ಎಲ್ಲರಿಗೂ ಪ್ರೇರಣೆ. ಅವರ ಜನ್ಮದಿನದಂದು ಶತ ಶತ ನಮನಗಳು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

‘ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಮಾತೃಭೂಮಿಗಾಗಿ ಪ್ರಾಣಾರ್ಪಣೆ ಮಾಡಿದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಜನ್ಮದಿನದ ಈ ದಿನದಂದು ನನ್ನ ಗೌರವಪೂರ್ವಕ ನಮನಗಳು. ಅವರ ಹೋರಾಟದ ಕೆಚ್ಚು, ದೇಶಪ್ರೇಮ ಅನುಕರಣೀಯ’ ಎಂದು ಜೆಡಿಎಸ್‌ ಪಕ್ಷದ ನಾಯಕ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

1907ರಲ್ಲಿ ತಮ್ಮ 23ನೇ ವಯಸ್ಸಿನಲ್ಲಿ ಭಗತ್ ಸಿಂಗ್ ಅವರನ್ನು ಬ್ರಿಟಿಷರು ಗಲ್ಲಿಗೇರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT