<p><strong>ಪಟ್ನಾ</strong>: ಜನ ಸುರಾಜ್ ಪಕ್ಷದ (ಜೆಎಸ್ಪಿ) ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರು ಸೇನಾ ಪಡೆಯ ಮಾಜಿ ಉಪ ಮುಖ್ಯಸ್ಥ, ಲೆಫ್ಟಿನಂಟ್ ಜನರಲ್ ಕೃಷ್ಣ ಸಿಂಗ್ ಅವರನ್ನು 'ತರಾರಿ' ವಿಧಾನಸಭೆ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಬುಧವಾರ ಘೋಷಿಸಿದ್ದಾರೆ.</p><p>ಚುನಾವಣಾ ಕಾರ್ಯತಂತ್ರ ನಿಪುಣರೂ ಆಗಿರುವ ಕಿಶೋರ್ ಹಾಗೂ ಜೆಎಸ್ಪಿ ಕಾರ್ಯಾಧ್ಯಕ್ಷ, ನಿವೃತ ರಾಜತಾಂತ್ರಿಕ ಅಧಿಕಾರಿ ಮನೋಜ್ ಭಾರ್ತಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಯ ಹೆಸರು ಪ್ರಕಟಿಸಲಾಗಿದೆ.</p><p>ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ಇತರ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದ ಕಿಶೋರ್, ಮರಳು ಅಕ್ರಮ ಗಣಿಗಾರಿಕೆ ಹಾಗೂ ಇತರ ಮಾಫಿಯಾಗಳಿಗೆ ಹೆಸರಾಗಿರುವ ಕ್ಷೇತ್ರದಲ್ಲಿ ಸಿಂಗ್ ಕಣಕ್ಕಿಳಿಯುತ್ತಿರುವುದು ತರಾರಿ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಪ್ರತಿಪಾದಿಸಿದ್ದಾರೆ.</p><p>'ಇಂಡಿಯಾ' ಮೈತ್ರಿಕೂಟದ ಭಾಗವಾಗಿರುವ ಸಿಪಿಐ (ಎಂಎಲ್) ನಾಯಕ ಸುದಾಮ ಪ್ರಸಾದ್ 'ತರಾರಿ' ಕ್ಷೇತ್ರದ ಶಾಸಕರಾಗಿದ್ದರು. ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಅರಾಹ್ನಿಂದ ಗೆದ್ದು ಸಂಸತ್ ಪ್ರವೇಶಿಸಿರುವುದರಿಂದ ಉಪಚುನಾವಣೆ ನಡೆಯುತ್ತಿದೆ.</p><p>ತರಾರಿ (ಎಸ್ಸಿ) ಜೊತೆಗೆ ರಾಮಗಢ, ಇಮಾಮ್ಗಂಜ್ (ಎಸ್ಸಿ) ಹಾಗೂ ಬೆಲಗಂಜ್ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.</p>.ಮಹಾರಾಷ್ಟ್ರದಲ್ಲಿ ನ.20, ಜಾರ್ಖಂಡ್ನಲ್ಲಿ ನ.13, 20ರಂದು ವಿಧಾನಸಭೆಗೆ ಮತದಾನ.ಮಹಾರಾಷ್ಟ್ರ | ಚುನಾವಣೆ ಘೋಷಣೆ ದಿನವೇ ಪಾಲಿಕೆ ಸಿಬ್ಬಂದಿಗೆ ₹29,000 ಕೋಟಿ ಬೋನಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಜನ ಸುರಾಜ್ ಪಕ್ಷದ (ಜೆಎಸ್ಪಿ) ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರು ಸೇನಾ ಪಡೆಯ ಮಾಜಿ ಉಪ ಮುಖ್ಯಸ್ಥ, ಲೆಫ್ಟಿನಂಟ್ ಜನರಲ್ ಕೃಷ್ಣ ಸಿಂಗ್ ಅವರನ್ನು 'ತರಾರಿ' ವಿಧಾನಸಭೆ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿ ಬುಧವಾರ ಘೋಷಿಸಿದ್ದಾರೆ.</p><p>ಚುನಾವಣಾ ಕಾರ್ಯತಂತ್ರ ನಿಪುಣರೂ ಆಗಿರುವ ಕಿಶೋರ್ ಹಾಗೂ ಜೆಎಸ್ಪಿ ಕಾರ್ಯಾಧ್ಯಕ್ಷ, ನಿವೃತ ರಾಜತಾಂತ್ರಿಕ ಅಧಿಕಾರಿ ಮನೋಜ್ ಭಾರ್ತಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಯ ಹೆಸರು ಪ್ರಕಟಿಸಲಾಗಿದೆ.</p><p>ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ಇತರ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದ ಕಿಶೋರ್, ಮರಳು ಅಕ್ರಮ ಗಣಿಗಾರಿಕೆ ಹಾಗೂ ಇತರ ಮಾಫಿಯಾಗಳಿಗೆ ಹೆಸರಾಗಿರುವ ಕ್ಷೇತ್ರದಲ್ಲಿ ಸಿಂಗ್ ಕಣಕ್ಕಿಳಿಯುತ್ತಿರುವುದು ತರಾರಿ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಪ್ರತಿಪಾದಿಸಿದ್ದಾರೆ.</p><p>'ಇಂಡಿಯಾ' ಮೈತ್ರಿಕೂಟದ ಭಾಗವಾಗಿರುವ ಸಿಪಿಐ (ಎಂಎಲ್) ನಾಯಕ ಸುದಾಮ ಪ್ರಸಾದ್ 'ತರಾರಿ' ಕ್ಷೇತ್ರದ ಶಾಸಕರಾಗಿದ್ದರು. ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಅರಾಹ್ನಿಂದ ಗೆದ್ದು ಸಂಸತ್ ಪ್ರವೇಶಿಸಿರುವುದರಿಂದ ಉಪಚುನಾವಣೆ ನಡೆಯುತ್ತಿದೆ.</p><p>ತರಾರಿ (ಎಸ್ಸಿ) ಜೊತೆಗೆ ರಾಮಗಢ, ಇಮಾಮ್ಗಂಜ್ (ಎಸ್ಸಿ) ಹಾಗೂ ಬೆಲಗಂಜ್ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.</p>.ಮಹಾರಾಷ್ಟ್ರದಲ್ಲಿ ನ.20, ಜಾರ್ಖಂಡ್ನಲ್ಲಿ ನ.13, 20ರಂದು ವಿಧಾನಸಭೆಗೆ ಮತದಾನ.ಮಹಾರಾಷ್ಟ್ರ | ಚುನಾವಣೆ ಘೋಷಣೆ ದಿನವೇ ಪಾಲಿಕೆ ಸಿಬ್ಬಂದಿಗೆ ₹29,000 ಕೋಟಿ ಬೋನಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>