<p><strong>ಗುವಾಹತಿ</strong>: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಾಲ್ಕು ಮಂದಿ ನಾಗರಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಕುಕಿ ಬಂಡುಕೋರ ಗುಂಪಿಗೆ ಸೇರಿದ್ದಾನೆ ಎನ್ನಲಾದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. </p>.<p>ಕಳೆದ ವರ್ಷದ ಜನವರಿಯಲ್ಲಿ ಈ ಹತ್ಯೆ ನಡೆದಿತ್ತು. ಬಿಷ್ಣುಪುರ ಜಿಲ್ಲೆಯಲ್ಲಿ ಮೈತೇಯಿ ಸಮುದಾಯದವರು ಪ್ರಾಬಲ್ಯ ಹೊಂದಿದ್ದಾರೆ.</p>.<p>ಆರೋಪಿಯ ಹೆಸರು ಲುನ್ಮಿನ್ಸೆ ಕಿಪ್ಜೆನ್ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ. ಇವನನ್ನು ಗುವಾಹತಿಯ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಬಂಧಿಸಲಾಗಿದೆ. ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ಜೈಲುಪಾಲಾಗಿದ್ದ.</p>.<p>2023ರ ಜನವರಿ 18ರಂದು ನಡೆದ ಹತ್ಯೆಗೆ ಸಂಬಂಧಿಸಿದಂತೆ ಆಗಿರುವ ಮೊದಲ ಬಂಧನ ಇದು ಎಂದು ಎನ್ಐಎ ಹೇಳಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದ ಭಾಗವಾಗಿ ಈ ಹತ್ಯೆ ನಡೆದಿದೆ ಎಂದು ಎನ್ಐಎ ಹೇಳಿದೆ. ಈ ಸಂಘರ್ಷದಲ್ಲಿ ಕಳೆದ ವರ್ಷದ ಮೇ ತಿಂಗಳಿನಿಂದ ಈಚೆಗೆ 225 ಮಂದಿ ಹತ್ಯೆಯಾಗಿದ್ದಾರೆ.</p>.<p>‘ಕಿಪ್ಜೆನ್ ಈ ನಾಲ್ವರ ಹತ್ಯೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದಾನೆ. ಈತ ಮೊದಲು ಕುಕಿ ಉಗ್ರ ಸಂಘಟನೆ ಕೆಎನ್ಎಫ್ನ ಸದಸ್ಯನಾಗಿದ್ದ. ನಂತರ ಈತ ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ ಎಂಬ ಸಂಘಟನೆ ಸೇರಿದ್ದ’ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹತಿ</strong>: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ನಾಲ್ಕು ಮಂದಿ ನಾಗರಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಕುಕಿ ಬಂಡುಕೋರ ಗುಂಪಿಗೆ ಸೇರಿದ್ದಾನೆ ಎನ್ನಲಾದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. </p>.<p>ಕಳೆದ ವರ್ಷದ ಜನವರಿಯಲ್ಲಿ ಈ ಹತ್ಯೆ ನಡೆದಿತ್ತು. ಬಿಷ್ಣುಪುರ ಜಿಲ್ಲೆಯಲ್ಲಿ ಮೈತೇಯಿ ಸಮುದಾಯದವರು ಪ್ರಾಬಲ್ಯ ಹೊಂದಿದ್ದಾರೆ.</p>.<p>ಆರೋಪಿಯ ಹೆಸರು ಲುನ್ಮಿನ್ಸೆ ಕಿಪ್ಜೆನ್ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ. ಇವನನ್ನು ಗುವಾಹತಿಯ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಬಂಧಿಸಲಾಗಿದೆ. ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ಜೈಲುಪಾಲಾಗಿದ್ದ.</p>.<p>2023ರ ಜನವರಿ 18ರಂದು ನಡೆದ ಹತ್ಯೆಗೆ ಸಂಬಂಧಿಸಿದಂತೆ ಆಗಿರುವ ಮೊದಲ ಬಂಧನ ಇದು ಎಂದು ಎನ್ಐಎ ಹೇಳಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದ ಭಾಗವಾಗಿ ಈ ಹತ್ಯೆ ನಡೆದಿದೆ ಎಂದು ಎನ್ಐಎ ಹೇಳಿದೆ. ಈ ಸಂಘರ್ಷದಲ್ಲಿ ಕಳೆದ ವರ್ಷದ ಮೇ ತಿಂಗಳಿನಿಂದ ಈಚೆಗೆ 225 ಮಂದಿ ಹತ್ಯೆಯಾಗಿದ್ದಾರೆ.</p>.<p>‘ಕಿಪ್ಜೆನ್ ಈ ನಾಲ್ವರ ಹತ್ಯೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದಾನೆ. ಈತ ಮೊದಲು ಕುಕಿ ಉಗ್ರ ಸಂಘಟನೆ ಕೆಎನ್ಎಫ್ನ ಸದಸ್ಯನಾಗಿದ್ದ. ನಂತರ ಈತ ಯುನೈಟೆಡ್ ಕುಕಿ ನ್ಯಾಷನಲ್ ಆರ್ಮಿ ಎಂಬ ಸಂಘಟನೆ ಸೇರಿದ್ದ’ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>