<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆದಾರರ ಹಣವನ್ನು ವೈಯಕ್ತಿಕ ಸೌಕರ್ಯಕ್ಕಾಗಿ ಬಳಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p><p>ಫ್ಲ್ಯಾಗ್ಸ್ಟ್ಯಾಫ್ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ದುಬಾರಿ ಬೆಲೆಯ ವಸ್ತುಗಳು ಮತ್ತು ಆಧುನಿಕ ಸೌಲಭ್ಯಗಳಿಗಾಗಿ ಕೇಜ್ರಿವಾಲ್ ಕೋಟಿಗಟ್ಟಲೆ ವ್ಯಯಿಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.</p><p>‘ಫ್ಲ್ಯಾಗ್ಸ್ಟ್ಯಾಫ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಅಳವಡಿಸಲಾಗಿದ್ದ 15 ಟಾಯ್ಲೆಟ್ ಸೀಟ್ಗಳು ನಾಪತ್ತೆಯಾಗಿವೆ. ₹12 ಲಕ್ಷ ಮೌಲ್ಯದ ಟಾಯ್ಲೆಟ್ ಸೀಟ್ಗಳಿಗೆ ತೆರಿಗೆದಾರರ ಹಣವನ್ನು ಕೇಜ್ರಿವಾಲ್ ಹೇಗೆ ಖರ್ಚು ಮಾಡಿದರು ಎಂಬುದನ್ನು ಜನರಿಗೆ ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಅಂತಹ 15 ಟಾಯ್ಲೆಟ್ ಸೀಟ್ಗಳನ್ನು ಕದ್ದಿದ್ದಾರೆ’ ಎಂದು ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ ಆರೋಪಿಸಿದ್ದಾರೆ.</p><p>‘ಅರವಿಂದ ಕೇಜ್ರಿವಾಲ್ ಅವರಿಗೆ ಮುಖ್ಯಮಂತ್ರಿ ನಿವಾಸದಲ್ಲಿ ಐಷಾರಾಮಿ ವಾಸ್ತವ್ಯವನ್ನು ಒದಗಿಸಲು ಖರ್ಚು ಮಾಡಿರುವ ತೆರಿಗೆದಾರರ ಕೋಟ್ಯಂತರ ಮೌಲ್ಯದ ಹಣದ ಲೆಕ್ಕವನ್ನು ನೀಡಬೇಕು’ ಎಂದು ಸಚ್ದೇವ ಆಗ್ರಹಿಸಿದರು.</p><p>ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅರವಿಂದ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ನಿವಾಸ ತೊರೆದು ಫಿರೋಜ್ಶಾ ರಸ್ತೆಯ ಮಂಡಿ ಹೌಸ್ ಬಳಿಯ ಬಂಗಲೆಗೆ ಸ್ಥಳಾಂತರಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆದಾರರ ಹಣವನ್ನು ವೈಯಕ್ತಿಕ ಸೌಕರ್ಯಕ್ಕಾಗಿ ಬಳಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p><p>ಫ್ಲ್ಯಾಗ್ಸ್ಟ್ಯಾಫ್ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ದುಬಾರಿ ಬೆಲೆಯ ವಸ್ತುಗಳು ಮತ್ತು ಆಧುನಿಕ ಸೌಲಭ್ಯಗಳಿಗಾಗಿ ಕೇಜ್ರಿವಾಲ್ ಕೋಟಿಗಟ್ಟಲೆ ವ್ಯಯಿಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.</p><p>‘ಫ್ಲ್ಯಾಗ್ಸ್ಟ್ಯಾಫ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಅಳವಡಿಸಲಾಗಿದ್ದ 15 ಟಾಯ್ಲೆಟ್ ಸೀಟ್ಗಳು ನಾಪತ್ತೆಯಾಗಿವೆ. ₹12 ಲಕ್ಷ ಮೌಲ್ಯದ ಟಾಯ್ಲೆಟ್ ಸೀಟ್ಗಳಿಗೆ ತೆರಿಗೆದಾರರ ಹಣವನ್ನು ಕೇಜ್ರಿವಾಲ್ ಹೇಗೆ ಖರ್ಚು ಮಾಡಿದರು ಎಂಬುದನ್ನು ಜನರಿಗೆ ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಅಂತಹ 15 ಟಾಯ್ಲೆಟ್ ಸೀಟ್ಗಳನ್ನು ಕದ್ದಿದ್ದಾರೆ’ ಎಂದು ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ ಆರೋಪಿಸಿದ್ದಾರೆ.</p><p>‘ಅರವಿಂದ ಕೇಜ್ರಿವಾಲ್ ಅವರಿಗೆ ಮುಖ್ಯಮಂತ್ರಿ ನಿವಾಸದಲ್ಲಿ ಐಷಾರಾಮಿ ವಾಸ್ತವ್ಯವನ್ನು ಒದಗಿಸಲು ಖರ್ಚು ಮಾಡಿರುವ ತೆರಿಗೆದಾರರ ಕೋಟ್ಯಂತರ ಮೌಲ್ಯದ ಹಣದ ಲೆಕ್ಕವನ್ನು ನೀಡಬೇಕು’ ಎಂದು ಸಚ್ದೇವ ಆಗ್ರಹಿಸಿದರು.</p><p>ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅರವಿಂದ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ನಿವಾಸ ತೊರೆದು ಫಿರೋಜ್ಶಾ ರಸ್ತೆಯ ಮಂಡಿ ಹೌಸ್ ಬಳಿಯ ಬಂಗಲೆಗೆ ಸ್ಥಳಾಂತರಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>