<p><strong>ನವದೆಹಲಿ</strong>: ದೆಹಲಿಯ ವಿಧಾನಸಭೆ ಆವರಣದಲ್ಲಿ ಗುರುವಾರ ಆಡಳಿತಾರೂಢ ಆಮ್ ಆದ್ಮಿ (ಎಎಪಿ) ಹಾಗೂ ಪ್ರತಿಪಕ್ಷ ಬಿಜೆಪಿ ಪರಸ್ಪರ ದೋಷಾರೋಪಗಳನ್ನು ಮಾಡುತ್ತ ಏಕಕಾಲಕ್ಕೆ ಪ್ರತಿಭಟನೆ ನಡೆಸಿವೆ.</p>.<p>ಬಂಧಿತರಾಗಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ವಿರುದ್ಧ ಎಎಪಿ ಶಾಸಕರು ಪ್ರತಿಭಟನೆ ನಡೆಸಿದರು. </p>.<p>ಆತಿಶಿ, ಸೌರಭ್ ಭಾರದ್ವಾಜ್ ಸೇರಿ ದಂತೆ ಪ್ರಮುಖ ನಾಯಕರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ‘ನಾನೂ ಕೇಜ್ರಿವಾಲ್’, ‘ಮೋದಿ ಹೆಚ್ಚು ಹೆದರುವ ವ್ಯಕ್ತಿ ಕೇಜ್ರಿವಾಲ್’ ಎಂಬ ಅರ್ಥದ ಸಾಲುಗಳನ್ನು ಬರೆದಿದ್ದ ಟೀಶರ್ಟ್ ಧರಿಸಿದ್ದರು. </p>.<p>ಘೋಷಣಾ ಫಲಕಗಳನ್ನು ಹಿಡಿದು ಬಿಜೆಪಿ ಶಾಸಕರು ಎಎಪಿ ಹಾಗೂ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆಗ ಕೇಜ್ರಿವಾಲ್ ಅವರಿಗೆ ಬೆಂಬಲ ಸೂಚಿಸಿ ಎಎಪಿ ಶಾಸಕರು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತ, ಬಿಜೆಪಿ ಪ್ರತಿಭಟನೆಯ ಹಿಂದೆಯೇ ಸಾಗಿದರು.</p>.<h2> <strong>ಪಿಐಎಲ್ ವಿಚಾರಣೆಗೆ ನಿರಾಕರಣೆ</strong> </h2><p>ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಅರ್ಜಿಯನ್ನು ಪರಿಶೀಲಿಸಿದ ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ನ್ಯಾಯಪೀಠವು ‘ಅರವಿಂದ್ ಅವರನ್ನು ಸರ್ಕಾರದಿಂದ ದೂರವಿರಿಸಲು ಸೂಕ್ತವಾಗಿರುವ ಯಾವುದೇ ಕಾನೂನು ನಿಬಂಧನೆಗಳನ್ನು ಅರ್ಜಿದಾರರು ತಿಳಿಸಿಲ್ಲ. ಇದರಲ್ಲಿ ನ್ಯಾಯಾಂಗವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಸಾಂವಿಧಾನಿಕ ವೈಫಲ್ಯ ಕಂಡುಬಂದಲ್ಲಿ ಕಾರ್ಯಾಂಗವು ಅದನ್ನು ಸರಿಪಡಿಸುತ್ತದೆ’ ಎಂದು ತಿಳಿಸಿದೆ. ‘ಇ.ಡಿ. ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ ಅವರನ್ನು ವಜಾಗೊಳಿಸುವಂತೆ ಆದೇಶಿಸಬೇಕು‘ ಎಂದು ಕೋರಿ ಸುರ್ಜಿತ್ ಸಿಂಗ್ ಯಾದವ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ವಿಧಾನಸಭೆ ಆವರಣದಲ್ಲಿ ಗುರುವಾರ ಆಡಳಿತಾರೂಢ ಆಮ್ ಆದ್ಮಿ (ಎಎಪಿ) ಹಾಗೂ ಪ್ರತಿಪಕ್ಷ ಬಿಜೆಪಿ ಪರಸ್ಪರ ದೋಷಾರೋಪಗಳನ್ನು ಮಾಡುತ್ತ ಏಕಕಾಲಕ್ಕೆ ಪ್ರತಿಭಟನೆ ನಡೆಸಿವೆ.</p>.<p>ಬಂಧಿತರಾಗಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ವಿರುದ್ಧ ಎಎಪಿ ಶಾಸಕರು ಪ್ರತಿಭಟನೆ ನಡೆಸಿದರು. </p>.<p>ಆತಿಶಿ, ಸೌರಭ್ ಭಾರದ್ವಾಜ್ ಸೇರಿ ದಂತೆ ಪ್ರಮುಖ ನಾಯಕರೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ‘ನಾನೂ ಕೇಜ್ರಿವಾಲ್’, ‘ಮೋದಿ ಹೆಚ್ಚು ಹೆದರುವ ವ್ಯಕ್ತಿ ಕೇಜ್ರಿವಾಲ್’ ಎಂಬ ಅರ್ಥದ ಸಾಲುಗಳನ್ನು ಬರೆದಿದ್ದ ಟೀಶರ್ಟ್ ಧರಿಸಿದ್ದರು. </p>.<p>ಘೋಷಣಾ ಫಲಕಗಳನ್ನು ಹಿಡಿದು ಬಿಜೆಪಿ ಶಾಸಕರು ಎಎಪಿ ಹಾಗೂ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆಗ ಕೇಜ್ರಿವಾಲ್ ಅವರಿಗೆ ಬೆಂಬಲ ಸೂಚಿಸಿ ಎಎಪಿ ಶಾಸಕರು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತ, ಬಿಜೆಪಿ ಪ್ರತಿಭಟನೆಯ ಹಿಂದೆಯೇ ಸಾಗಿದರು.</p>.<h2> <strong>ಪಿಐಎಲ್ ವಿಚಾರಣೆಗೆ ನಿರಾಕರಣೆ</strong> </h2><p>ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಅರ್ಜಿಯನ್ನು ಪರಿಶೀಲಿಸಿದ ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ನ್ಯಾಯಪೀಠವು ‘ಅರವಿಂದ್ ಅವರನ್ನು ಸರ್ಕಾರದಿಂದ ದೂರವಿರಿಸಲು ಸೂಕ್ತವಾಗಿರುವ ಯಾವುದೇ ಕಾನೂನು ನಿಬಂಧನೆಗಳನ್ನು ಅರ್ಜಿದಾರರು ತಿಳಿಸಿಲ್ಲ. ಇದರಲ್ಲಿ ನ್ಯಾಯಾಂಗವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಸಾಂವಿಧಾನಿಕ ವೈಫಲ್ಯ ಕಂಡುಬಂದಲ್ಲಿ ಕಾರ್ಯಾಂಗವು ಅದನ್ನು ಸರಿಪಡಿಸುತ್ತದೆ’ ಎಂದು ತಿಳಿಸಿದೆ. ‘ಇ.ಡಿ. ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ ಅವರನ್ನು ವಜಾಗೊಳಿಸುವಂತೆ ಆದೇಶಿಸಬೇಕು‘ ಎಂದು ಕೋರಿ ಸುರ್ಜಿತ್ ಸಿಂಗ್ ಯಾದವ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>