ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ

Published : 27 ಜೂನ್ 2024, 9:12 IST
Last Updated : 27 ಜೂನ್ 2024, 9:12 IST
ಫಾಲೋ ಮಾಡಿ
Comments

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಭಾರತ ರತ್ನ ಪುರಸ್ಕೃತ ಲಾಲ್‌ ಕೃಷ್ಣ ಅಡ್ವಾಣಿ ಅವರು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ, ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಯಿಂದ ಇಂದು (ಗುರುವಾರ) ಮಧ್ಯಾಹ್ನ ಬಿಡುಗಡೆ ಮಾಡಲಾಗಿದೆ ಎಂದು 'ಡಿಡಿ ನ್ಯೂಸ್‌' ವರದಿ ಮಾಡಿದೆ.

ದೇಶದ ಮಾಜಿ ಉಪಪ್ರಧಾನಿ ಅಡ್ವಾಣಿ ಅವರ ಆರೋಗ್ಯ ಏರುಪೇರಾದ ಕಾರಣ ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಟ್ವೀಟ್ ಮಾಡಿದೆ.

ಅಯೋಧ್ಯೆ ರಾಮ ಜನ್ಮಭೂಮಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಿಂದುತ್ವದ ಬದ್ಧ ಪ್ರತಿಪಾದಕ ಅಡ್ವಾಣಿ ಅವರು 1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ (ಈಗಿನ ಪಾಕಿಸ್ತಾನ) ಜನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT