ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮತ್ತೆ ಭಯೋತ್ಪಾದನೆ ತಲೆದೋರುತ್ತದೆ ಎಂದು ಹೇಳುತ್ತಿರುವ ಬಿಜೆಪಿಯು ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಈ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
‘ಹಿಂದೂ ಸಮುದಾಯದಲ್ಲಿ ಭಯ ಮೂಡಿಸುವ ಮೂಲಕ ಅವರೂ ಮತ ಹಾಕುತ್ತಾರೆ ಎಂದು ಬಿಜೆಪಿ ಭಾವಿಸಿದೆ ಅದು ಅವರ ತಪ್ಪು ಕಲ್ಪನೆಯಾಗಿದೆ. ಹಿಂದೂಗಳು ಬದಲಾಗಿದ್ದಾರೆ. ಬಿಜೆಪಿಗರು ಮೊದಲು ರಾಮನ ಹೆಸರಿನಲ್ಲಿ ಮತ ಕೇಳುತ್ತಿದ್ದರು. ಈಗ ಅವರಲ್ಲಿ ಭಯದ ವಾತಾವರಣ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.