<p><strong>ಅಹಮದಾಬಾದ್</strong>: ಗುಜರಾತ್ನ ವಡೋದರ ಮತ್ತು ಸಾಬರ್ಕಾಂಠಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ವೈಯಕ್ತಿಕ ಕಾರಣ ನೀಡಿ ಚುನಾವಣಾ ಕಣದಿಂದ ಶನಿವಾರ ಹಿಂದೆ ಸರಿದಿದ್ದಾರೆ.</p><p>ಬಿಜೆಪಿಯು ವಡೋದರ ಕ್ಷೇತ್ರದಿಂದ ಹಾಲಿ ಸಂಸದೆ ರಂಜನಾಬೆನ್ ಭಟ್ ಅವರನ್ನು ಕಣಕ್ಕಿಳಿಸಿತ್ತು. ‘2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ ಎಂದು ಅವರು ‘ಎಕ್ಸ್’ನಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. </p><p>ಇದರ ಬೆನ್ನಲ್ಲೇ ಸಾಬರ್ಕಾಂಠಾ ಕ್ಷೇತ್ರದ ಅಭ್ಯರ್ಥಿ ಭೀಖಾಜಿ ಠಾಕೂರ್ ಅವರೂ ಹಿಂದೆ ಸರಿಯುವ ನಿರ್ಧಾರ ಘೋಷಿಸಿದರು. ‘ವೈಯಕ್ತಿಕ ಕಾರಣಗಳಿಂದಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p><p>ವಡೋದರ ಕ್ಷೇತ್ರದಿಂದ ರಂಜನಾಬೆನ್ ಅವರನ್ನು ಕಣಕ್ಕಿಳಿಸಿರುವುದಕ್ಕೆ ಬಿಜೆಪಿಯ ಕೆಲವು ಸ್ಥಳೀಯ ನಾಯಕರಲ್ಲೇ ಅಸಮಾಧಾನ ಇತ್ತು. ಅವರಿಗೆ ಟಿಕೆಟ್ ನೀಡಿರುವುದನ್ನು ಟೀಕಿಸಿ ನಗರದ ಕೆಲವೆಡೆ ಬ್ಯಾನರ್ಗಳನ್ನು ಕಟ್ಟಲಾಗಿತ್ತು. ಅದರ ಬೆನ್ನಲ್ಲೇ ಅವರು ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ವಡೋದರ ಕ್ಷೇತ್ರವನ್ನು ಬಿಟ್ಟುಕೊಟ್ಟ ಬಳಿಕ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ರಂಜನಾಬೆನ್ ಗೆದ್ದಿದ್ದರು. 2019 ರಲ್ಲಿ ಅವರು ಪುನರಾಯ್ಕೆಯಾಗಿದ್ದರು. ಗುಜರಾತ್ನ 26 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಗುಜರಾತ್ನ ವಡೋದರ ಮತ್ತು ಸಾಬರ್ಕಾಂಠಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ವೈಯಕ್ತಿಕ ಕಾರಣ ನೀಡಿ ಚುನಾವಣಾ ಕಣದಿಂದ ಶನಿವಾರ ಹಿಂದೆ ಸರಿದಿದ್ದಾರೆ.</p><p>ಬಿಜೆಪಿಯು ವಡೋದರ ಕ್ಷೇತ್ರದಿಂದ ಹಾಲಿ ಸಂಸದೆ ರಂಜನಾಬೆನ್ ಭಟ್ ಅವರನ್ನು ಕಣಕ್ಕಿಳಿಸಿತ್ತು. ‘2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ ಎಂದು ಅವರು ‘ಎಕ್ಸ್’ನಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. </p><p>ಇದರ ಬೆನ್ನಲ್ಲೇ ಸಾಬರ್ಕಾಂಠಾ ಕ್ಷೇತ್ರದ ಅಭ್ಯರ್ಥಿ ಭೀಖಾಜಿ ಠಾಕೂರ್ ಅವರೂ ಹಿಂದೆ ಸರಿಯುವ ನಿರ್ಧಾರ ಘೋಷಿಸಿದರು. ‘ವೈಯಕ್ತಿಕ ಕಾರಣಗಳಿಂದಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’ ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p><p>ವಡೋದರ ಕ್ಷೇತ್ರದಿಂದ ರಂಜನಾಬೆನ್ ಅವರನ್ನು ಕಣಕ್ಕಿಳಿಸಿರುವುದಕ್ಕೆ ಬಿಜೆಪಿಯ ಕೆಲವು ಸ್ಥಳೀಯ ನಾಯಕರಲ್ಲೇ ಅಸಮಾಧಾನ ಇತ್ತು. ಅವರಿಗೆ ಟಿಕೆಟ್ ನೀಡಿರುವುದನ್ನು ಟೀಕಿಸಿ ನಗರದ ಕೆಲವೆಡೆ ಬ್ಯಾನರ್ಗಳನ್ನು ಕಟ್ಟಲಾಗಿತ್ತು. ಅದರ ಬೆನ್ನಲ್ಲೇ ಅವರು ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ವಡೋದರ ಕ್ಷೇತ್ರವನ್ನು ಬಿಟ್ಟುಕೊಟ್ಟ ಬಳಿಕ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ರಂಜನಾಬೆನ್ ಗೆದ್ದಿದ್ದರು. 2019 ರಲ್ಲಿ ಅವರು ಪುನರಾಯ್ಕೆಯಾಗಿದ್ದರು. ಗುಜರಾತ್ನ 26 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>