<p><strong>ಕೊಯಮತ್ತೂರು</strong>: ತಮಿಳುನಾಡಿನ ಕೊಯಮತ್ತೂರು ವಲಯದ ಡೆಪ್ಯೂಟಿ ಐಜಿಪಿ ಹಾಗೂ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಸಿ. ವಿಜಯಕುಮಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.</p><p>ಶುಕ್ರವಾರ ಬೆಳಿಗ್ಗೆ 6.45 ರ ಸುಮಾರು ವಾಯು ವಿಹಾರ ಮುಗಿಸಿ ಬಂದ ನಂತರ ನೇರವಾಗಿ ತಮ್ಮ ಗೃಹ ಕಚೇರಿಯ ಒಳಗೆ ಹೋಗಿ ಸರ್ವಿಸ್ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ಸಂಜೆ ಅವರು ತಮ್ಮ ಕುಟುಂಬದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು.</p><p>ಘಟನಾ ಸ್ಥಳಕ್ಕೆ ತಮಿಳುನಾಡು ಡಿಜಿಪಿ ಶಂಕರ್ ಜೈವಾಲ್, ಕೊಯಮತ್ತೂರು ಐಜಿಪಿ ಆರ್ ಸುಧಾಕರ್ ಭೇಟಿ ನೀಡಿದ್ದರು. ವಿಜಯಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜೈವಾಲ್ ತಿಳಿಸಿದ್ದಾರೆ.</p>.<p>ನಿದ್ರಾಹೀನತೆಯಿಂದ ಬಳಲುತ್ತಿದ್ದ ವಿಜಯಕುಮಾರ್ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಅವರ ಆತ್ಮಹತ್ಯೆಗೆ ಕೆಲಸದ ಒತ್ತಡವೂ ಕಾರಣ ಇದೆ ಎಂದು ಹೇಳಲಾಗುತ್ತಿದೆ.</p><p>2009 ರ ಬ್ಯಾಚ್ನ ತಮಿಳುನಾಡು ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರು ಕಡಲೂರು, ಕಾಂಚಿಪುರಂ, ತಿರುವರೂರು, ನಾಗಪಟ್ಟಿಣಂ ಜಿಲ್ಲೆಗಳ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.</p><p>ಕೊಯಮತ್ತೂರು ವಲಯಕ್ಕೆ ಡೆಪ್ಯೂಟಿ ಐಜಿಪಿಯಾಗಿ ಬರುವ ಮೊದಲು ಚೆನ್ನೈನ ಅಣ್ಣಾ ನಗರ್ ಡಿಸಿಪಿಯಾಗಿದ್ದರು. ಅವರ ದುರಂತ ಸಾವಿಗೆ ಸಿಎಂ ಎಂಕೆ ಸ್ಟಾಲಿನ್ ಅವರು ಆಘಾತ ವ್ಯಕ್ತಪಡಿಸಿದ್ದು, ತಮಿಳುನಾಡು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ.</p><p>ಇನ್ನು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಈ ಕುರಿತು ಪ್ರತಿಕ್ರಿಯಿಸಿ, ‘ಒಬ್ಬ ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರಿಂದ ನಾನು ಸಾಕಷ್ಟು ಕಲಿತಿದ್ದೆ. ಅವರ ಈ ನಿರ್ಧಾರ ನನಗೆ ತೀವ್ರ ಆಘಾತವನ್ನುಂಟುಮಾಡಿದೆ. ನಾವು ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಅವರ ಸಾವಿನ ಬಗ್ಗೆ ರಾಜ್ಯ ಸರ್ಕಾರ ಉನ್ನತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು</strong>: ತಮಿಳುನಾಡಿನ ಕೊಯಮತ್ತೂರು ವಲಯದ ಡೆಪ್ಯೂಟಿ ಐಜಿಪಿ ಹಾಗೂ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಸಿ. ವಿಜಯಕುಮಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.</p><p>ಶುಕ್ರವಾರ ಬೆಳಿಗ್ಗೆ 6.45 ರ ಸುಮಾರು ವಾಯು ವಿಹಾರ ಮುಗಿಸಿ ಬಂದ ನಂತರ ನೇರವಾಗಿ ತಮ್ಮ ಗೃಹ ಕಚೇರಿಯ ಒಳಗೆ ಹೋಗಿ ಸರ್ವಿಸ್ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ಸಂಜೆ ಅವರು ತಮ್ಮ ಕುಟುಂಬದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು.</p><p>ಘಟನಾ ಸ್ಥಳಕ್ಕೆ ತಮಿಳುನಾಡು ಡಿಜಿಪಿ ಶಂಕರ್ ಜೈವಾಲ್, ಕೊಯಮತ್ತೂರು ಐಜಿಪಿ ಆರ್ ಸುಧಾಕರ್ ಭೇಟಿ ನೀಡಿದ್ದರು. ವಿಜಯಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜೈವಾಲ್ ತಿಳಿಸಿದ್ದಾರೆ.</p>.<p>ನಿದ್ರಾಹೀನತೆಯಿಂದ ಬಳಲುತ್ತಿದ್ದ ವಿಜಯಕುಮಾರ್ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಅವರ ಆತ್ಮಹತ್ಯೆಗೆ ಕೆಲಸದ ಒತ್ತಡವೂ ಕಾರಣ ಇದೆ ಎಂದು ಹೇಳಲಾಗುತ್ತಿದೆ.</p><p>2009 ರ ಬ್ಯಾಚ್ನ ತಮಿಳುನಾಡು ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರು ಕಡಲೂರು, ಕಾಂಚಿಪುರಂ, ತಿರುವರೂರು, ನಾಗಪಟ್ಟಿಣಂ ಜಿಲ್ಲೆಗಳ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.</p><p>ಕೊಯಮತ್ತೂರು ವಲಯಕ್ಕೆ ಡೆಪ್ಯೂಟಿ ಐಜಿಪಿಯಾಗಿ ಬರುವ ಮೊದಲು ಚೆನ್ನೈನ ಅಣ್ಣಾ ನಗರ್ ಡಿಸಿಪಿಯಾಗಿದ್ದರು. ಅವರ ದುರಂತ ಸಾವಿಗೆ ಸಿಎಂ ಎಂಕೆ ಸ್ಟಾಲಿನ್ ಅವರು ಆಘಾತ ವ್ಯಕ್ತಪಡಿಸಿದ್ದು, ತಮಿಳುನಾಡು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ.</p><p>ಇನ್ನು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಈ ಕುರಿತು ಪ್ರತಿಕ್ರಿಯಿಸಿ, ‘ಒಬ್ಬ ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರಿಂದ ನಾನು ಸಾಕಷ್ಟು ಕಲಿತಿದ್ದೆ. ಅವರ ಈ ನಿರ್ಧಾರ ನನಗೆ ತೀವ್ರ ಆಘಾತವನ್ನುಂಟುಮಾಡಿದೆ. ನಾವು ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಅವರ ಸಾವಿನ ಬಗ್ಗೆ ರಾಜ್ಯ ಸರ್ಕಾರ ಉನ್ನತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>