<p><strong>ನವದೆಹಲಿ/ವಿಶ್ವಸಂಸ್ಥೆ:</strong> ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಮಾಡಿರುವ ಆರೋಪ ಪೂರ್ವಗ್ರಹದಿಂದ ಕೂಡಿದೆ ಮತ್ತು ರಾಜಕೀಯ ಪ್ರೇರಿತವಾಗಿದೆ ಎಂದು ಭಾರತ ಗುರುವಾರ ಹೇಳಿದೆ. </p>.<p>ಹರ್ದೀಪ್ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾ ಭಾರತದೊಂದಿಗೆ ಯಾವುದೇ ನಿರ್ದಿಷ್ಟ ಮಾಹಿತಿ ಹಂಚಿಕೊಂಡಿಲ್ಲ ಎಂದು ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.</p>.<p>ಕೆನಡಾ ಜತೆಗಿನ ರಾಜತಾಂತ್ರಿಕ ವಿವಾದದ ಬಗ್ಗೆ ಭಾರತ ತನ್ನ ಮಿತ್ರರಾಷ್ಟ್ರಗಳಿಗೆ ಅಭಿಪ್ರಾಯಗಳನ್ನು ತಿಳಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಾಗ್ಚಿ, ‘ಭಾರತವು ತನ್ನ ನಿಲುವನ್ನು ತಿಳಿಸಿದೆ’ ಎಂದರು. </p>.<p>ಪ್ರತಿಕ್ರಿಯೆ ನೀಡದ ಟ್ರುಡೊ: </p>.<p> ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಸಂಸತ್ತಿನಲ್ಲಿ ತಾವು ಮಾಡಿದ್ದ ಆರೋಪಗಳನ್ನು ಭಾರತ ನಿರಾಕರಿಸಿರುವ ಬಗ್ಗೆ ಪ್ರಧಾನಿ ಜಸ್ಟಿನ್ ಟ್ರುಡೊ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.</p>.<p>ಖಾಲಿಸ್ತಾನ ನಾಯಕ ಹರ್ದೀಪ್ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿರುವುದಾಗಿ ಟ್ರುಡೊ ಆರೋಪಿಸಿದ್ದರು. </p>.<p>ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನದಲ್ಲಿ ಭಾಗವಹಿಸುವ ಸಲುವಾಗಿ ಕೆನಡಾ ಪ್ರಧಾನಿ ಇಲ್ಲಿಗೆ ಬಂದಿದ್ದರು. ವಿಶ್ವಸಂಸ್ಥೆ ಆವರಣದೊಳಗೆ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಸಂದರ್ಭಗಳಲ್ಲಿ ಪಿಟಿಐ ಸುದ್ದಿ ಸಂಸ್ಥೆಯ ಪ್ರತಿನಿಧಿ ಅವರನ್ನು ಮಾತನಾಡಿಸಲು ಯತ್ನಿಸಿದರು.</p>.<p>ಆರೋಪವನ್ನು ಭಾರತ ನಿರಾಕರಿಸಿರುವ ಕುರಿತು ಕೇಳಿದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದೆ ಸಾಗಿದರು. ಅವರನ್ನು ಭದ್ರತಾ ಸಿಬ್ಬಂದಿ ಸುತ್ತುವರೆದಿದ್ದರು.</p>.<h2>ಕೆನಡಾ ತಿರಸ್ಕಾರ </h2>.<p>ಕೆನಡಾಕ್ಕೆ ಪ್ರಯಾಣ ಕೈಗೊಳ್ಳಬಯಸುವವರಿಗೆ ಸುರಕ್ಷತೆ ದೃಷ್ಟಿಯಿಂದ ಭಾರತ ನೀಡಿದ್ದ ಮುನ್ನೆಚ್ಚರಿಕೆಗಳನ್ನು ಅಲ್ಲಿನ ಸರ್ಕಾರ ತಿರಸ್ಕರಿಸಿದ್ದು ಸಾವಧಾನದಿಂದ ಇರುವಂತೆ ಕರೆ ನೀಡಿದೆ. ವಿಶ್ವದಲ್ಲಿಯೇ ಕೆನಡಾ ಅತ್ಯಂತ ಸುರಕ್ಷಿತ ಸ್ಥಳ ಎಂದು ಹೇಳಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ವಿಶ್ವಸಂಸ್ಥೆ:</strong> ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಮಾಡಿರುವ ಆರೋಪ ಪೂರ್ವಗ್ರಹದಿಂದ ಕೂಡಿದೆ ಮತ್ತು ರಾಜಕೀಯ ಪ್ರೇರಿತವಾಗಿದೆ ಎಂದು ಭಾರತ ಗುರುವಾರ ಹೇಳಿದೆ. </p>.<p>ಹರ್ದೀಪ್ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾ ಭಾರತದೊಂದಿಗೆ ಯಾವುದೇ ನಿರ್ದಿಷ್ಟ ಮಾಹಿತಿ ಹಂಚಿಕೊಂಡಿಲ್ಲ ಎಂದು ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.</p>.<p>ಕೆನಡಾ ಜತೆಗಿನ ರಾಜತಾಂತ್ರಿಕ ವಿವಾದದ ಬಗ್ಗೆ ಭಾರತ ತನ್ನ ಮಿತ್ರರಾಷ್ಟ್ರಗಳಿಗೆ ಅಭಿಪ್ರಾಯಗಳನ್ನು ತಿಳಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಾಗ್ಚಿ, ‘ಭಾರತವು ತನ್ನ ನಿಲುವನ್ನು ತಿಳಿಸಿದೆ’ ಎಂದರು. </p>.<p>ಪ್ರತಿಕ್ರಿಯೆ ನೀಡದ ಟ್ರುಡೊ: </p>.<p> ಖಾಲಿಸ್ತಾನ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಸಂಸತ್ತಿನಲ್ಲಿ ತಾವು ಮಾಡಿದ್ದ ಆರೋಪಗಳನ್ನು ಭಾರತ ನಿರಾಕರಿಸಿರುವ ಬಗ್ಗೆ ಪ್ರಧಾನಿ ಜಸ್ಟಿನ್ ಟ್ರುಡೊ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.</p>.<p>ಖಾಲಿಸ್ತಾನ ನಾಯಕ ಹರ್ದೀಪ್ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿರುವುದಾಗಿ ಟ್ರುಡೊ ಆರೋಪಿಸಿದ್ದರು. </p>.<p>ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನದಲ್ಲಿ ಭಾಗವಹಿಸುವ ಸಲುವಾಗಿ ಕೆನಡಾ ಪ್ರಧಾನಿ ಇಲ್ಲಿಗೆ ಬಂದಿದ್ದರು. ವಿಶ್ವಸಂಸ್ಥೆ ಆವರಣದೊಳಗೆ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಸಂದರ್ಭಗಳಲ್ಲಿ ಪಿಟಿಐ ಸುದ್ದಿ ಸಂಸ್ಥೆಯ ಪ್ರತಿನಿಧಿ ಅವರನ್ನು ಮಾತನಾಡಿಸಲು ಯತ್ನಿಸಿದರು.</p>.<p>ಆರೋಪವನ್ನು ಭಾರತ ನಿರಾಕರಿಸಿರುವ ಕುರಿತು ಕೇಳಿದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದೆ ಸಾಗಿದರು. ಅವರನ್ನು ಭದ್ರತಾ ಸಿಬ್ಬಂದಿ ಸುತ್ತುವರೆದಿದ್ದರು.</p>.<h2>ಕೆನಡಾ ತಿರಸ್ಕಾರ </h2>.<p>ಕೆನಡಾಕ್ಕೆ ಪ್ರಯಾಣ ಕೈಗೊಳ್ಳಬಯಸುವವರಿಗೆ ಸುರಕ್ಷತೆ ದೃಷ್ಟಿಯಿಂದ ಭಾರತ ನೀಡಿದ್ದ ಮುನ್ನೆಚ್ಚರಿಕೆಗಳನ್ನು ಅಲ್ಲಿನ ಸರ್ಕಾರ ತಿರಸ್ಕರಿಸಿದ್ದು ಸಾವಧಾನದಿಂದ ಇರುವಂತೆ ಕರೆ ನೀಡಿದೆ. ವಿಶ್ವದಲ್ಲಿಯೇ ಕೆನಡಾ ಅತ್ಯಂತ ಸುರಕ್ಷಿತ ಸ್ಥಳ ಎಂದು ಹೇಳಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>