ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಜಿಲ್ ವಳವನ್ ಅವರು ಈ ಪ್ರಕರಣವನ್ನು ಇಲ್ಲಿನ ಜನಪತ್ರಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದರು.
ಈ ಪ್ರಕರಣದಲ್ಲಿ ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ವಾಣಿಜ್ಯ ತೆರಿಗೆ ಸಚಿವ ರಮಣ, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಟಿ.ಕೆ ರಾಜೇಂದ್ರನ್, ಎಸ್ ಜಾರ್ಜ್ ಸೇರಿದಂತೆ 17 ಮಂದಿ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.