ವಿದ್ಯಾರ್ಥಿನಿಯ ಶವ ಪತ್ತೆಯಾದ ಸೆಮಿನಾರ್ ಹಾಲ್ನಿಂದ ಸಾಕ್ಷಿಗಳನ್ನು ತರಾತುರಿಯಲ್ಲಿ ಸಂಗ್ರಹಿಸಿರುವ ಹಿಂದಿನ ಕಾರಣವೆಂದೂ ಪ್ರಶ್ನಿಸಲಾಯಿತು. ಅವರ ನೀಡಿದ ಹೇಳಿಕೆಗಳನ್ನು ದಾಖಲಿಸಲಾಗಿದೆ. ತನಿಖೆ ಭಾಗವಾಗಿ ಮತ್ತೆ ಹೆಚ್ಚಿನ ಮಾಹಿತಿ ಅಗತ್ಯವಿದ್ದರೆ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸುತ್ತೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.
ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಆಸ್ಪತ್ರೆಯ ಮಾಜಿ ವೈದ್ಯಕೀಯ ಅಧೀಕ್ಷಕ ಮತ್ತು ಉಪ ಪ್ರಾಂಶುಪಾಲರಾದ (ಎಂಎಸ್ವಿಪಿ) ಡಾ.ಸಂಜಯ್ ವಸಿಷ್ಠ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಿತ್ತು.