<p><strong>ಹೈದರಾಬಾದ್</strong>: ಕೇಂದ್ರ ಮತ್ತು ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಅವರಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಒತ್ತಾಯಿಸಿದ್ದಾರೆ.</p><p>ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಉನ್ನತ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಅತ್ಯಾಚಾರಿಗಳಿಗೆ ಈ ತೀರ್ಪು ಭವಿಷ್ಯದಲ್ಲಿ ಎಚ್ಚರಿಕೆಯ ಗಂಟೆಯಾಗಲಿದೆ’ ಎಂದರು.</p><p>‘ಯಾರೊಬ್ಬರು ತಾವು ನಂಬಿರುವ ರಾಜಕೀಯ ಸಿದ್ದಾಂತದಿಂದಾಗಿ ಕಾನೂನಿನಿಂದ ಮುಕ್ತರಲ್ಲ ಎಂಬುವುದನ್ನು ಅತ್ಯಾಚಾರಿಗಳು ಅರ್ಥಮಾಡಿಕೊಳ್ಳುವುದು ಸೂಕ್ತ’ ಎಂದು ಹೇಳಿದರು.</p><p>‘ನರೇಂದ್ರ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿದ್ದಾಗ ಈ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಇಡೀ ರಾಜ್ಯ ಕೋಮು ದಳ್ಳುರಿಯಲ್ಲಿ ಉರಿಯುತ್ತಿತ್ತು. ಪ್ರಕರಣದ ವಿಚಾರಣೆಯನ್ನು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಗಿತ್ತು’ ಎಂದು ಹೇಳಿದರು.</p><p>‘ಸನ್ನಡತೆ ಮೇಲೆ 11 ಅಪರಾಧಿಗಳ ಬಿಡುಗಡೆಗೊಳಿಸಿದ್ದನ್ನು ಬಿಜೆಪಿ ಶಾಸಕರಿಬ್ಬರು ಸಮರ್ಥಿಸಿಕೊಂಡಿದ್ದಲ್ಲದೇ, ಒಬ್ಬ ಬಿಜೆಪಿ ಶಾಸಕ ಅಪರಾಧಿಗಳನ್ನು ‘ಸಂಸ್ಕಾರಿ’ ಎಂದು ಕರೆದಿದ್ದ’ ಎಂದು ಬೇಸರ ವ್ಯಕ್ತಪಡಿಸಿದರು.</p><p>‘ಕೇಂದ್ರ ಹಾಗೂ ಗುಜರಾತ್ನಲ್ಲಿರುವ ಬಿಜೆಪಿ ಸರ್ಕಾರಗಳ ಸಹಕಾರದಿಂದ ಅಪರಾಧಿಗಳು ಬಿಡುಗಡೆಗೊಂಡಿದ್ದರು. ಆದ್ದರಿಂದ ಕೇಂದ್ರ ಮತ್ತು ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಅವರಲ್ಲಿ ಕ್ಷಮೆ ಕೇಳಬೇಕಿದೆ. ಇದೊಂದೆ ಅವರಿಗುಳಿದಿರುವ ದಾರಿ’ ಎಂದು ಹೇಳಿದರು.</p><p>‘ನರೇಂದ್ರ ಮೋದಿ ಅವರು ನಾರಿ ಶಕ್ತಿ ಬಗ್ಗೆ ಗಂಟೆಗಟ್ಟಲೆ ಮಾತನಾಡುತ್ತಾರೆ. ಅದೆಲ್ಲ ಪೊಳ್ಳು’ ಎಂದು ಕಿಡಿಕಾರಿದರು.</p><p>ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದ್ದು, ಎರಡು ವಾರಗಳಲ್ಲಿ ಅಪರಾಧಿಗಳನ್ನು ಮರಳಿ ಜೈಲಿಗೆ ಕಳುಹಿಸುವಂತೆ ಆದೇಶಿಸಿದೆ.</p>.Bilkis Bano Case:2 ವಾರದಲ್ಲಿ ಜೈಲಿಗೆ ಹಿಂದಿರುಗಲು ಅಪರಾಧಿಗಳಿಗೆ ಕೋರ್ಟ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಕೇಂದ್ರ ಮತ್ತು ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಅವರಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಒತ್ತಾಯಿಸಿದ್ದಾರೆ.</p><p>ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಉನ್ನತ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಅತ್ಯಾಚಾರಿಗಳಿಗೆ ಈ ತೀರ್ಪು ಭವಿಷ್ಯದಲ್ಲಿ ಎಚ್ಚರಿಕೆಯ ಗಂಟೆಯಾಗಲಿದೆ’ ಎಂದರು.</p><p>‘ಯಾರೊಬ್ಬರು ತಾವು ನಂಬಿರುವ ರಾಜಕೀಯ ಸಿದ್ದಾಂತದಿಂದಾಗಿ ಕಾನೂನಿನಿಂದ ಮುಕ್ತರಲ್ಲ ಎಂಬುವುದನ್ನು ಅತ್ಯಾಚಾರಿಗಳು ಅರ್ಥಮಾಡಿಕೊಳ್ಳುವುದು ಸೂಕ್ತ’ ಎಂದು ಹೇಳಿದರು.</p><p>‘ನರೇಂದ್ರ ಮೋದಿ ಅವರು ಗುಜರಾತ್ನ ಮುಖ್ಯಮಂತ್ರಿಯಾಗಿದ್ದಾಗ ಈ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಇಡೀ ರಾಜ್ಯ ಕೋಮು ದಳ್ಳುರಿಯಲ್ಲಿ ಉರಿಯುತ್ತಿತ್ತು. ಪ್ರಕರಣದ ವಿಚಾರಣೆಯನ್ನು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಗಿತ್ತು’ ಎಂದು ಹೇಳಿದರು.</p><p>‘ಸನ್ನಡತೆ ಮೇಲೆ 11 ಅಪರಾಧಿಗಳ ಬಿಡುಗಡೆಗೊಳಿಸಿದ್ದನ್ನು ಬಿಜೆಪಿ ಶಾಸಕರಿಬ್ಬರು ಸಮರ್ಥಿಸಿಕೊಂಡಿದ್ದಲ್ಲದೇ, ಒಬ್ಬ ಬಿಜೆಪಿ ಶಾಸಕ ಅಪರಾಧಿಗಳನ್ನು ‘ಸಂಸ್ಕಾರಿ’ ಎಂದು ಕರೆದಿದ್ದ’ ಎಂದು ಬೇಸರ ವ್ಯಕ್ತಪಡಿಸಿದರು.</p><p>‘ಕೇಂದ್ರ ಹಾಗೂ ಗುಜರಾತ್ನಲ್ಲಿರುವ ಬಿಜೆಪಿ ಸರ್ಕಾರಗಳ ಸಹಕಾರದಿಂದ ಅಪರಾಧಿಗಳು ಬಿಡುಗಡೆಗೊಂಡಿದ್ದರು. ಆದ್ದರಿಂದ ಕೇಂದ್ರ ಮತ್ತು ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಅವರಲ್ಲಿ ಕ್ಷಮೆ ಕೇಳಬೇಕಿದೆ. ಇದೊಂದೆ ಅವರಿಗುಳಿದಿರುವ ದಾರಿ’ ಎಂದು ಹೇಳಿದರು.</p><p>‘ನರೇಂದ್ರ ಮೋದಿ ಅವರು ನಾರಿ ಶಕ್ತಿ ಬಗ್ಗೆ ಗಂಟೆಗಟ್ಟಲೆ ಮಾತನಾಡುತ್ತಾರೆ. ಅದೆಲ್ಲ ಪೊಳ್ಳು’ ಎಂದು ಕಿಡಿಕಾರಿದರು.</p><p>ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದ್ದು, ಎರಡು ವಾರಗಳಲ್ಲಿ ಅಪರಾಧಿಗಳನ್ನು ಮರಳಿ ಜೈಲಿಗೆ ಕಳುಹಿಸುವಂತೆ ಆದೇಶಿಸಿದೆ.</p>.Bilkis Bano Case:2 ವಾರದಲ್ಲಿ ಜೈಲಿಗೆ ಹಿಂದಿರುಗಲು ಅಪರಾಧಿಗಳಿಗೆ ಕೋರ್ಟ್ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>