ಅಮರಾವತಿ: ಅಮರಾವತಿಯೇ ಆಂಧ್ರಪ್ರದೇಶದ ರಾಜಧಾನಿ ಮತ್ತು ಏಕೈಕ ರಾಜಧಾನಿಯಾಗಿರಲಿದೆ ಎಂದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಪುನರುಚ್ಚರಿಸಿದ್ದಾರೆ.
ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ಮುಂದೆ ರಾಜಧಾನಿ ವಿಷಯದಲ್ಲಿ ಯಾರಿಗೂ ಆಟ ಆಡಲು ಅವಕಾಶ ಕೊಡುವುದಿಲ್ಲ ಎಂದು ಗುಡುಗಿದ್ದಾರೆ.
ಅಮರಾವತಿ ನಮ್ಮ ರಾಜಧಾನಿ, ಮತ್ತೆ ಇದೊಂದೆ ನಮಗೆ ರಾಜಧಾನಿ. ಇನ್ನು ಈ ವಿಷಯದಲ್ಲಿ ಗೊಂದಲ ಇರುವುದಿಲ್ಲ ಎಂದು ಪರೋಕ್ಷವಾಗಿ ವೈಎಸ್ಆರ್ಸಿಪಿಗೆ ಚಾಟಿ ಬೀಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ಆಡಳಿತಾವಧಿಯಲ್ಲಿ, ಅಮರಾವತಿ, ವಿಶಾಖಪಟ್ಟಣ ಮತ್ತು ಕರ್ನೂಲ್ ಗಳನ್ನು ಆಂಧ್ರಪ್ರದೇಶದ ಮೂರು ರಾಜಧಾನಿಗಳನ್ನಾಗಿ ಮಾಡಲಾಗುವುದು ಎಂದು ಘೋಷಿಸಲಾಗಿತ್ತು.