<p><strong>ಕಾಂಕೇರ್</strong>: ಹಳಿ ಮೇಲೆ ಮರ ಬಿದ್ದಿದ್ದರಿಂದ ಪ್ರಯಾಣಿಕರಿಲ್ಲದೇ ಸಂಚರಿಸುತ್ತಿದ್ದ ರೈಲೊಂದು ಹಳಿ ತಪ್ಪಿರುವ ಘಟನೆ ಛತ್ತೀಸಗಢದ ಕಾಂಕೇರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.</p><p>ಘಟನೆಯಲ್ಲಿ ಲೊಕೊ ಪೈಲಟ್ ಗಾಯಗೊಂಡಿದ್ದು ಅವರನ್ನು ಕಾಂಕೇರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಶುಕ್ರವಾರ ಬೆಳಿಗ್ಗೆ ಭಾನುಪ್ರತಾಪಪುರ–ಗುದ್ದಾಂ ನಡುವೆ ಸಂಚರಿಸುತ್ತಿದ್ದ ಪ್ರಯಾಣಿಕರಿಲ್ಲದ ಡೆಮು ರೈಲು ದಲಿರಂಜಹಾರ್ ಬಳಿ ಅಪಘಾತಕ್ಕೆ ಈಡಾಗಿದೆ. ಈ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳಿ ಮೇಲೆ ಮರ ಉರುಳಿ ಬಿದ್ದಿತ್ತು. ಮಳೆ ಇದ್ದಿದ್ದರಿಂದ ಲೊಕೊ ಪೈಲಟ್ ಮರ ಬಿದ್ದಿದ್ದನ್ನು ಗಮನಿಸಿರಲಿಲ್ಲ. ಹೀಗಾಗಿ ಹಳಿ ತಪ್ಪಿದೆ ಎಂದು ತಿಳಿಸಿದ್ದಾರೆ.</p><p>ಡೆಮು ರೈಲಿನ ನಾಲ್ಕಕ್ಕೂ ಹೆಚ್ಚು ಬೋಗಿಗಳು ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.</p><p>ಸ್ಥಳದಲ್ಲಿ ಬಿದ್ದಿದ್ದ ಮರವನ್ನು ತೆರವುಗೊಳಿಸಲಾಗಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭವಾಗಿದೆ. ರೈಲಿನಲ್ಲಿ ಪ್ರಯಾಣಿಕರು ಇರದಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಂಕೇರ್</strong>: ಹಳಿ ಮೇಲೆ ಮರ ಬಿದ್ದಿದ್ದರಿಂದ ಪ್ರಯಾಣಿಕರಿಲ್ಲದೇ ಸಂಚರಿಸುತ್ತಿದ್ದ ರೈಲೊಂದು ಹಳಿ ತಪ್ಪಿರುವ ಘಟನೆ ಛತ್ತೀಸಗಢದ ಕಾಂಕೇರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.</p><p>ಘಟನೆಯಲ್ಲಿ ಲೊಕೊ ಪೈಲಟ್ ಗಾಯಗೊಂಡಿದ್ದು ಅವರನ್ನು ಕಾಂಕೇರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಶುಕ್ರವಾರ ಬೆಳಿಗ್ಗೆ ಭಾನುಪ್ರತಾಪಪುರ–ಗುದ್ದಾಂ ನಡುವೆ ಸಂಚರಿಸುತ್ತಿದ್ದ ಪ್ರಯಾಣಿಕರಿಲ್ಲದ ಡೆಮು ರೈಲು ದಲಿರಂಜಹಾರ್ ಬಳಿ ಅಪಘಾತಕ್ಕೆ ಈಡಾಗಿದೆ. ಈ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಳಿ ಮೇಲೆ ಮರ ಉರುಳಿ ಬಿದ್ದಿತ್ತು. ಮಳೆ ಇದ್ದಿದ್ದರಿಂದ ಲೊಕೊ ಪೈಲಟ್ ಮರ ಬಿದ್ದಿದ್ದನ್ನು ಗಮನಿಸಿರಲಿಲ್ಲ. ಹೀಗಾಗಿ ಹಳಿ ತಪ್ಪಿದೆ ಎಂದು ತಿಳಿಸಿದ್ದಾರೆ.</p><p>ಡೆಮು ರೈಲಿನ ನಾಲ್ಕಕ್ಕೂ ಹೆಚ್ಚು ಬೋಗಿಗಳು ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.</p><p>ಸ್ಥಳದಲ್ಲಿ ಬಿದ್ದಿದ್ದ ಮರವನ್ನು ತೆರವುಗೊಳಿಸಲಾಗಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭವಾಗಿದೆ. ರೈಲಿನಲ್ಲಿ ಪ್ರಯಾಣಿಕರು ಇರದಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>