<p><strong>ನವದೆಹಲಿ:</strong> ದೇಶದ ರಾಜಧಾನಿಯಲ್ಲಿ ವಾಯು ಗುಣಮಟ್ಟವು ತೀವ್ರವಾಗಿ ಕುಸಿತ ಕಂಡಿರುವ ಸಂದರ್ಭದಲ್ಲಿ, ಮಾಲಿನ್ಯದಿಂದ ಮುಕ್ತವಾಗಿರುವ ವಾತಾವರಣದಲ್ಲಿ ಘನತೆಯಿಂದ ಜೀವನ ನಡೆಸುವ ಹಕ್ಕು ಪ್ರಜೆಗಳಿಗೆ ಇದೆ ಎಂಬುದನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ನೆನಪಿಸಿಕೊಟ್ಟಿದೆ.</p>.<p>ನೆರೆಯ ರಾಜ್ಯದಲ್ಲಿ ಕೂಳೆಯನ್ನು ಸುಡುವುದರ ಬಗ್ಗೆ ಪ್ರಸ್ತಾಪಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ತ್ರಿಸದಸ್ಯ ಪೀಠವು, ತಪ್ಪು ಮಾಡಿದವರ ವಿರುದ್ಧ ಕ್ರಮ ಜರುಗಿಸಲು ಇದ್ದ ಅವಕಾಶ ಬದಲಾಯಿಸಿ, ಅವರಿಂದ ದಂಡ ವಸೂಲಿಗೆ ಮಾತ್ರ ಅವಕಾಶ ಕಲ್ಪಿಸಿ ಪರಿಸರ ಸಂರಕ್ಷಣಾ ಕಾಯ್ದೆಯ ‘ಹಲ್ಲುಕಿತ್ತಿದ್ದಕ್ಕೆ’ ಕೇಂದ್ರ ಸರ್ಕಾರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿತು.</p>.<p>ಅಗತ್ಯ ವ್ಯವಸ್ಥೆಯನ್ನು ರೂಪಿಸದೆಯೇ ‘ರಾಷ್ಟ್ರ ರಾಜಧಾನಿ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ವಾಯು ಗುಣಮಟ್ಟ ನಿರ್ವಹಣಾ ಕಾಯ್ದೆ – 2021’ (ಸಿಎಕ್ಯೂಎಂ ಕಾಯ್ದೆ) ರೂಪಿಸಲಾಯಿತು ಎಂದು ಪೀಠವು ಹೇಳಿತು.</p>.<p>ವಾಯು ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಪೀಠವು, ಇವು ಜಾರಿಯಲ್ಲಿ ಇರುವ ಕಾನೂನುಗಳ ಅನುಷ್ಠಾನಕ್ಕೆ ಮಾತ್ರ ಸಂಬಂಧಿಸಿದವು ಅಲ್ಲ; ಇವು ಸಂವಿಧಾನದ 21ನೆಯ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾಗಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದವು ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ರಾಜಧಾನಿಯಲ್ಲಿ ವಾಯು ಗುಣಮಟ್ಟವು ತೀವ್ರವಾಗಿ ಕುಸಿತ ಕಂಡಿರುವ ಸಂದರ್ಭದಲ್ಲಿ, ಮಾಲಿನ್ಯದಿಂದ ಮುಕ್ತವಾಗಿರುವ ವಾತಾವರಣದಲ್ಲಿ ಘನತೆಯಿಂದ ಜೀವನ ನಡೆಸುವ ಹಕ್ಕು ಪ್ರಜೆಗಳಿಗೆ ಇದೆ ಎಂಬುದನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ನೆನಪಿಸಿಕೊಟ್ಟಿದೆ.</p>.<p>ನೆರೆಯ ರಾಜ್ಯದಲ್ಲಿ ಕೂಳೆಯನ್ನು ಸುಡುವುದರ ಬಗ್ಗೆ ಪ್ರಸ್ತಾಪಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇರುವ ತ್ರಿಸದಸ್ಯ ಪೀಠವು, ತಪ್ಪು ಮಾಡಿದವರ ವಿರುದ್ಧ ಕ್ರಮ ಜರುಗಿಸಲು ಇದ್ದ ಅವಕಾಶ ಬದಲಾಯಿಸಿ, ಅವರಿಂದ ದಂಡ ವಸೂಲಿಗೆ ಮಾತ್ರ ಅವಕಾಶ ಕಲ್ಪಿಸಿ ಪರಿಸರ ಸಂರಕ್ಷಣಾ ಕಾಯ್ದೆಯ ‘ಹಲ್ಲುಕಿತ್ತಿದ್ದಕ್ಕೆ’ ಕೇಂದ್ರ ಸರ್ಕಾರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿತು.</p>.<p>ಅಗತ್ಯ ವ್ಯವಸ್ಥೆಯನ್ನು ರೂಪಿಸದೆಯೇ ‘ರಾಷ್ಟ್ರ ರಾಜಧಾನಿ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ವಾಯು ಗುಣಮಟ್ಟ ನಿರ್ವಹಣಾ ಕಾಯ್ದೆ – 2021’ (ಸಿಎಕ್ಯೂಎಂ ಕಾಯ್ದೆ) ರೂಪಿಸಲಾಯಿತು ಎಂದು ಪೀಠವು ಹೇಳಿತು.</p>.<p>ವಾಯು ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಪೀಠವು, ಇವು ಜಾರಿಯಲ್ಲಿ ಇರುವ ಕಾನೂನುಗಳ ಅನುಷ್ಠಾನಕ್ಕೆ ಮಾತ್ರ ಸಂಬಂಧಿಸಿದವು ಅಲ್ಲ; ಇವು ಸಂವಿಧಾನದ 21ನೆಯ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾಗಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದವು ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>