<p><strong>ಠಾಣೆ (ಪಿಟಿಐ):</strong> ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ್ ಮತ್ತು ಮಥಾಡಿ ನಾಯಕ ನರೇಂದ್ರ ಪಾಟೀಲ್ ಅವರಿಗೆ ಈ ಸಾಲಿನ ‘ಮರಾಠ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಯೋಜಕರು ಗುರುವಾರ ತಿಳಿಸಿದರು. </p>.<p>ಮರಾಠಾ ಸಮುದಾಯದ ಗಣ್ಯರಿಗೆ ಈ ಪ್ರಶಸ್ತಿಯನ್ನು ಪ್ರತಿವರ್ಷವೂ ನೀಡಲಾಗುತ್ತದೆ.</p>.<p>ಮರಾಠ ಕ್ರಾಂತಿ ಮೋರ್ಚಾ ಅಧ್ಯಕ್ಷ ರಮೇಶ್ ಅಂಬ್ರೆ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರುವರಿ 19ರಂದು ನಡೆಯಲಿರುವ ಶಿವಾಜಿ ಜಯಂತಿಯಂದು ಥಾಣೆಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ಜರಾಂಗೆ ಅವರು ಸದ್ಯ ಜಲ್ನಾ ಜಿಲ್ಲೆಯಲ್ಲಿ ನಿರಶನ ಕೈಗೊಂಡಿದ್ದಾರೆ. ಅವರಿಗೆ ಆನ್ಲೈನ್ ಮೂಲಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.</p>.<p>ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಕೋರಿ ಜರಾಂಗೆ ಅವರು ನಡೆಸುತ್ತಿರುವ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ, ‘ಸರ್ಕಾರವು ಫೆಬ್ರುವರಿ 20ರಂದು ವಿಶೇಷ ಅಧಿವೇಶನ ಕರೆದಿದೆ. ಅಧಿವೇಶನದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಾದುನೋಡಬೇಕಿದೆ’ ಎಂದು ಅಂಬ್ರೆ ಹೇಳಿದರು.</p>.<p>ಪ್ರಶಸ್ತಿಗೆ ಶಿಂದೆ ಅವರನ್ನು ಆಯ್ಕೆ ಮಾಡಿರುವ ಕುರಿತ ಪ್ರಶ್ನೆಗೆ, ಶಿಂದೆ ಅವರು ಮರಾಠರು ಎಂಬ ಕಾರಣಕ್ಕಾಗಿ ಪ್ರಶಸ್ತಿ ನೀಡಲಾಗಿದೆ. ಮುಖ್ಯಮಂತ್ರಿ ಎಂಬ ಕಾರಣಕ್ಕಾಗಿ ಅಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ (ಪಿಟಿಐ):</strong> ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ್ ಮತ್ತು ಮಥಾಡಿ ನಾಯಕ ನರೇಂದ್ರ ಪಾಟೀಲ್ ಅವರಿಗೆ ಈ ಸಾಲಿನ ‘ಮರಾಠ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಯೋಜಕರು ಗುರುವಾರ ತಿಳಿಸಿದರು. </p>.<p>ಮರಾಠಾ ಸಮುದಾಯದ ಗಣ್ಯರಿಗೆ ಈ ಪ್ರಶಸ್ತಿಯನ್ನು ಪ್ರತಿವರ್ಷವೂ ನೀಡಲಾಗುತ್ತದೆ.</p>.<p>ಮರಾಠ ಕ್ರಾಂತಿ ಮೋರ್ಚಾ ಅಧ್ಯಕ್ಷ ರಮೇಶ್ ಅಂಬ್ರೆ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರುವರಿ 19ರಂದು ನಡೆಯಲಿರುವ ಶಿವಾಜಿ ಜಯಂತಿಯಂದು ಥಾಣೆಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ಜರಾಂಗೆ ಅವರು ಸದ್ಯ ಜಲ್ನಾ ಜಿಲ್ಲೆಯಲ್ಲಿ ನಿರಶನ ಕೈಗೊಂಡಿದ್ದಾರೆ. ಅವರಿಗೆ ಆನ್ಲೈನ್ ಮೂಲಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.</p>.<p>ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಕೋರಿ ಜರಾಂಗೆ ಅವರು ನಡೆಸುತ್ತಿರುವ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ, ‘ಸರ್ಕಾರವು ಫೆಬ್ರುವರಿ 20ರಂದು ವಿಶೇಷ ಅಧಿವೇಶನ ಕರೆದಿದೆ. ಅಧಿವೇಶನದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಾದುನೋಡಬೇಕಿದೆ’ ಎಂದು ಅಂಬ್ರೆ ಹೇಳಿದರು.</p>.<p>ಪ್ರಶಸ್ತಿಗೆ ಶಿಂದೆ ಅವರನ್ನು ಆಯ್ಕೆ ಮಾಡಿರುವ ಕುರಿತ ಪ್ರಶ್ನೆಗೆ, ಶಿಂದೆ ಅವರು ಮರಾಠರು ಎಂಬ ಕಾರಣಕ್ಕಾಗಿ ಪ್ರಶಸ್ತಿ ನೀಡಲಾಗಿದೆ. ಮುಖ್ಯಮಂತ್ರಿ ಎಂಬ ಕಾರಣಕ್ಕಾಗಿ ಅಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>