<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿ 20 ಶೃಂಗಸಭೆಯ ಹೆಸರಿನಡಿ ಚುನಾವಣಾ ಅಭಿಯಾನವನ್ನು ನಡೆಸುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>‘1999ರಲ್ಲಿ ಜಿ 20 ರಚನೆಯಾಯಿತು. 19 ರಾಷ್ಟ್ರಗಳು ಹಾಗೂ ಯುರೋಪಿಯನ್ ಒಕ್ಕೂಟವು ಇದರ ಸದಸ್ಯತ್ವ ಪಡೆದಿವೆ. ಇಲ್ಲಿಯವರೆಗೆ 17 ರಾಷ್ಟ್ರಗಳು ಇದರ ಆತಿಥ್ಯವಹಿಸಿವೆ. ಈಗ ಭಾರತದ ಸರದಿಯಾಗಿದ್ದು, ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ಶೃಂಗಸಭೆ ನಿಗದಿಯಾಗಿದೆ. ಆದರೆ, ತನ್ನ ಚುನಾವಣಾ ತಂತ್ರದ ಭಾಗವಾಗಿ ಇದನ್ನು ಬಳಸಿಕೊಳ್ಳುತ್ತಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ (ಟ್ವಿಟರ್) ದೂರಿದ್ದಾರೆ.</p>.<p>‘ಕೇಂದ್ರದ ಈ ನಡೆ ಸರಿಯಲ್ಲ. ಇತರೆ ದೇಶಗಳಲ್ಲಿ ಇಂತಹ ವಾತಾವರಣ ಕಾಣಲು ಸಾಧ್ಯವಿಲ್ಲ. ದೇಶ ಎದುರಿಸುತ್ತಿರುವ ಗಂಭೀರ ವಿಷಯಗಳಿಂದ ಜನರ ಲಕ್ಷ್ಯವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಈ ದುರ್ಬಳಕೆಯ ತಂತ್ರ ಅನುಸರಿಸುತ್ತಿದೆ’ ಎಂದು ಆಪಾದಿಸಿದ್ದಾರೆ.</p>.<p>80ರ ದಶಕದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿ ವೇಳೆ ನವದೆಹಲಿಯಲ್ಲಿ ಕಾಮನ್ವೆಲ್ತ್ ರಾಷ್ಟ್ರಗಳ ಶೃಂಗಸಭೆಯನ್ನು ಸಂಘಟಿಸಲಾಗಿತ್ತು. ಇದಾದ ಬಳಿಕ ನೂರಕ್ಕೂ ಹೆಚ್ಚು ರಾಷ್ಟ್ರಗಳ ಅಲಿಪ್ತ ಶೃಂಗಸಭೆಯನ್ನೂ ಆಯೋಜಿಸಲಾಗಿತ್ತು. ಆದರೆ, ಇಂತಹ ಸಭೆಗಳನ್ನು ಎಂದಿಗೂ ರಾಜಕೀಯ ಲಾಭಕ್ಕೆ ಬಳಸಿಕೊಂಡಿಲ್ಲ ಎಂದಿದ್ದಾರೆ.</p>.<p>‘ಉತ್ತಮವಾಗಿ ಕಾರ್ಯಕ್ರಮ ಸಂಘಟಿಸುವುದರಲ್ಲಿ ಮೋದಿ ನಿಪುಣರಾಗಿದ್ದಾರೆ ಎಂದು ಈ ಹಿಂದೆ ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಹೇಳಿದ್ದು ನನಗೆ ಈಗಲೂ ನೆನಪಿದೆ. ಕಾರ್ಯಕ್ರಮಗಳ ಆಯೋಜನೆ ಮೂಲಕ ದೇಶದ ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವಲ್ಲಿ ಪ್ರಧಾನಿ ಕಾರ್ಯತತ್ಪರವಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿ 20 ಶೃಂಗಸಭೆಯ ಹೆಸರಿನಡಿ ಚುನಾವಣಾ ಅಭಿಯಾನವನ್ನು ನಡೆಸುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>‘1999ರಲ್ಲಿ ಜಿ 20 ರಚನೆಯಾಯಿತು. 19 ರಾಷ್ಟ್ರಗಳು ಹಾಗೂ ಯುರೋಪಿಯನ್ ಒಕ್ಕೂಟವು ಇದರ ಸದಸ್ಯತ್ವ ಪಡೆದಿವೆ. ಇಲ್ಲಿಯವರೆಗೆ 17 ರಾಷ್ಟ್ರಗಳು ಇದರ ಆತಿಥ್ಯವಹಿಸಿವೆ. ಈಗ ಭಾರತದ ಸರದಿಯಾಗಿದ್ದು, ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ಶೃಂಗಸಭೆ ನಿಗದಿಯಾಗಿದೆ. ಆದರೆ, ತನ್ನ ಚುನಾವಣಾ ತಂತ್ರದ ಭಾಗವಾಗಿ ಇದನ್ನು ಬಳಸಿಕೊಳ್ಳುತ್ತಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ (ಟ್ವಿಟರ್) ದೂರಿದ್ದಾರೆ.</p>.<p>‘ಕೇಂದ್ರದ ಈ ನಡೆ ಸರಿಯಲ್ಲ. ಇತರೆ ದೇಶಗಳಲ್ಲಿ ಇಂತಹ ವಾತಾವರಣ ಕಾಣಲು ಸಾಧ್ಯವಿಲ್ಲ. ದೇಶ ಎದುರಿಸುತ್ತಿರುವ ಗಂಭೀರ ವಿಷಯಗಳಿಂದ ಜನರ ಲಕ್ಷ್ಯವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಈ ದುರ್ಬಳಕೆಯ ತಂತ್ರ ಅನುಸರಿಸುತ್ತಿದೆ’ ಎಂದು ಆಪಾದಿಸಿದ್ದಾರೆ.</p>.<p>80ರ ದಶಕದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿ ವೇಳೆ ನವದೆಹಲಿಯಲ್ಲಿ ಕಾಮನ್ವೆಲ್ತ್ ರಾಷ್ಟ್ರಗಳ ಶೃಂಗಸಭೆಯನ್ನು ಸಂಘಟಿಸಲಾಗಿತ್ತು. ಇದಾದ ಬಳಿಕ ನೂರಕ್ಕೂ ಹೆಚ್ಚು ರಾಷ್ಟ್ರಗಳ ಅಲಿಪ್ತ ಶೃಂಗಸಭೆಯನ್ನೂ ಆಯೋಜಿಸಲಾಗಿತ್ತು. ಆದರೆ, ಇಂತಹ ಸಭೆಗಳನ್ನು ಎಂದಿಗೂ ರಾಜಕೀಯ ಲಾಭಕ್ಕೆ ಬಳಸಿಕೊಂಡಿಲ್ಲ ಎಂದಿದ್ದಾರೆ.</p>.<p>‘ಉತ್ತಮವಾಗಿ ಕಾರ್ಯಕ್ರಮ ಸಂಘಟಿಸುವುದರಲ್ಲಿ ಮೋದಿ ನಿಪುಣರಾಗಿದ್ದಾರೆ ಎಂದು ಈ ಹಿಂದೆ ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಹೇಳಿದ್ದು ನನಗೆ ಈಗಲೂ ನೆನಪಿದೆ. ಕಾರ್ಯಕ್ರಮಗಳ ಆಯೋಜನೆ ಮೂಲಕ ದೇಶದ ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವಲ್ಲಿ ಪ್ರಧಾನಿ ಕಾರ್ಯತತ್ಪರವಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>