ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಸರ್ಕಾರ ಅಪಾಯದಲ್ಲಿಲ್ಲ: ಕಾಂಗ್ರೆಸ್‌

ಎಐಸಿಸಿ ನಾಯಕರನ್ನು ಭೇಟಿಯಾದ ವಿಕ್ರಮಾದಿತ್ಯ ಸಿಂಗ್‌
Published : 4 ಮಾರ್ಚ್ 2024, 14:59 IST
Last Updated : 4 ಮಾರ್ಚ್ 2024, 14:59 IST
ಫಾಲೋ ಮಾಡಿ
Comments
ಶಾಸಕರ ವಿರುದ್ಧದ ಕ್ರಮ ಸಮರ್ಥನೀಯವಲ್ಲ: ಬಿಂದಾಲ್‌
ಶಿಮ್ಲಾ: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್‌ ಅವರ ಪರವಾಗಿ ಮತಚಲಾಯಿಸಿದ್ದ ಕಾಂಗ್ರೆಸ್‌ನ ಬಂಡಾಯ ಶಾಸಕರು ಮತ್ತು ಪಕ್ಷೇತರ ಶಾಸಕರ ವಿರುದ್ಧ ಅಧಿಕಾರಿಗಳನ್ನು ಮತ್ತು ಪೊಲೀಸರನ್ನು ಬಳಸಿ ಕ್ರಮ ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿ ಹಿಮಾಚಲ ಪ್ರದೇಶ ಘಟಕದ ಅಧ್ಯಕ್ಷ ರಾಜೀವ್‌ ಬಿಂದಾಲ್‌ ಅವರು ಸೋಮವಾರ ಹೇಳಿದರು. ಕಾಂಗ್ರೆಸ್‌ ಸರ್ವಾಧಿಕಾರಿ ನಿರ್ಧಾರವನ್ನು ಕೈಗೊಂಡಿದೆ ಎಂದೂ ಅವರು ಆರೋಪಿಸಿದರು. ಬಂಡಾಯ ಶಾಸಕರ ಮನೆಗಳು ಮತ್ತು ಸಂಸ್ಥೆಗಳಲ್ಲಿ ಶೋಧ ಕಾರ್ಯ ನಡೆಸುವ ಮೂಲಕ ಭಯದ ವಾತಾವರಣ ನಿರ್ಮಿಸಲಾಗಿದೆ ಇದು ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಜೆಪಿಯ 15 ಮಂದಿ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲಾಗಿದೆ ಎಂದೂ ಆರೋಪಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT