ಹೈದರಾಬಾದ್ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಮಾಚಲದಲ್ಲಿ ಕಾಂಗ್ರೆಸ್ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಆದರೆ ಈಗ ಅಲ್ಲಿ ನೌಕರರಿಗೆ ಹಾಗೂ ಶಾಸಕರಿಗೆ ವೇತನ ಪಾವತಿ ಮಾಡಲೂ ಹಣವಿಲ್ಲ’ ಎಂದು ಹೇಳಿದ್ದಾರೆ.
‘ಹಿಮಾಚಲ ಹಾಗೂ ಕರ್ನಾಟಕ ಸರ್ಕಾರಗಳು ಹಣಕಾಸಿನ ಮುಗ್ಗಟ್ಟಿನಲ್ಲಿವೆ. ಕರ್ನಾಟಕ ಮುಖ್ಯಮಂತ್ರಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ತೆಲಂಗಾಣದಲ್ಲೂ ಅದೇ ಸ್ಥಿತಿ ಬರಲಿದೆ’ ಎಂದಿದ್ದಾರೆ.