<p><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಜನವರಿ 14ರಿಂದ ಮಾರ್ಚ್ 30ರವರೆಗೆ ಮಣಿಪುರದಿಂದ ಮಹಾರಾಷ್ಟ್ರದವರೆಗೆ ‘ಭಾರತ್ ಜೋಡೊ ನ್ಯಾಯ್ ಯಾತ್ರೆ‘ ನಡೆಸುವರು ಎಂದು ಕಾಂಗ್ರೆಸ್ ಹೇಳಿದೆ.</p><p>ಇದು ಹಿಂದಿನ ಭಾರತ್ ಜೋಡೊದ ವಿಸ್ತರಿತ ಯಾತ್ರೆ. ಇದಕ್ಕಾಗಿ ಪೂರಕ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಯಾತ್ರೆ ಸಂಬಂಧ ವಿಡಿಯೊ ಬಿಡುಗಡೆ ಮಾಡಲಾಗಿದೆ. </p>. <p>ದೇಶದ ಎಲ್ಲರಿಗೂ ನ್ಯಾಯ, ಸಮಾನತೆ, ಉದ್ಯೋಗ ಮತ್ತು ಗೌರವ ನೀಡುವ ಅಗತ್ಯತೆಯನ್ನು ಈ ವಿಡಿಯೊ ಒತ್ತಿ ಹೇಳಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆಯ ದೃಶ್ಯಗಳು ಇದರಲ್ಲಿವೆ.</p><p>ಸಿರಿವಂತರ ಹೃದಯದಲ್ಲಿರುವ ಬಿಜೆಪಿಯವರಿಗೆ ಬಡವರು, ನಿರ್ಗತಿಕರು ಕಾಣುವುದಿಲ್ಲ. ಈ ಸಲ ಇವರಿಗೆ ನ್ಯಾಯ ಸಿಗಲಿದೆ. ನ್ಯಾಯ, ಸಮಾನತೆ, ಉದ್ಯೋಗ ಮತ್ತು ಗೌರವದ ಹಕ್ಕುಗಳು ಬಡವರಿಗೆ ಸಿಗಲಿವೆ ಎಂದು ವಿಡಿಯೊದಲ್ಲಿ ಹೇಳಲಾಗಿದೆ.</p><p>‘ಭಾರತ್ ಜೋಡೊ ನ್ಯಾಯ್ ಯಾತ್ರೆ‘ ಜನವರಿ 14ರಂದು ಮಣಿಪುರದಲ್ಲಿ ಆರಂಭವಾಗಲಿದ್ದು ಮಾರ್ಚ್ 30ರಂದು ಮಹಾರಾಷ್ಟ್ರದಲ್ಲಿ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಜನವರಿ 14ರಿಂದ ಮಾರ್ಚ್ 30ರವರೆಗೆ ಮಣಿಪುರದಿಂದ ಮಹಾರಾಷ್ಟ್ರದವರೆಗೆ ‘ಭಾರತ್ ಜೋಡೊ ನ್ಯಾಯ್ ಯಾತ್ರೆ‘ ನಡೆಸುವರು ಎಂದು ಕಾಂಗ್ರೆಸ್ ಹೇಳಿದೆ.</p><p>ಇದು ಹಿಂದಿನ ಭಾರತ್ ಜೋಡೊದ ವಿಸ್ತರಿತ ಯಾತ್ರೆ. ಇದಕ್ಕಾಗಿ ಪೂರಕ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಯಾತ್ರೆ ಸಂಬಂಧ ವಿಡಿಯೊ ಬಿಡುಗಡೆ ಮಾಡಲಾಗಿದೆ. </p>. <p>ದೇಶದ ಎಲ್ಲರಿಗೂ ನ್ಯಾಯ, ಸಮಾನತೆ, ಉದ್ಯೋಗ ಮತ್ತು ಗೌರವ ನೀಡುವ ಅಗತ್ಯತೆಯನ್ನು ಈ ವಿಡಿಯೊ ಒತ್ತಿ ಹೇಳಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆಯ ದೃಶ್ಯಗಳು ಇದರಲ್ಲಿವೆ.</p><p>ಸಿರಿವಂತರ ಹೃದಯದಲ್ಲಿರುವ ಬಿಜೆಪಿಯವರಿಗೆ ಬಡವರು, ನಿರ್ಗತಿಕರು ಕಾಣುವುದಿಲ್ಲ. ಈ ಸಲ ಇವರಿಗೆ ನ್ಯಾಯ ಸಿಗಲಿದೆ. ನ್ಯಾಯ, ಸಮಾನತೆ, ಉದ್ಯೋಗ ಮತ್ತು ಗೌರವದ ಹಕ್ಕುಗಳು ಬಡವರಿಗೆ ಸಿಗಲಿವೆ ಎಂದು ವಿಡಿಯೊದಲ್ಲಿ ಹೇಳಲಾಗಿದೆ.</p><p>‘ಭಾರತ್ ಜೋಡೊ ನ್ಯಾಯ್ ಯಾತ್ರೆ‘ ಜನವರಿ 14ರಂದು ಮಣಿಪುರದಲ್ಲಿ ಆರಂಭವಾಗಲಿದ್ದು ಮಾರ್ಚ್ 30ರಂದು ಮಹಾರಾಷ್ಟ್ರದಲ್ಲಿ ಮುಕ್ತಾಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>