<p><strong>ನವದೆಹಲಿ</strong>: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಸ್ಟಿ ಮೀಸಲು ಕ್ಷೇತ್ರ ಲೋಹಾರದಂಗದಿಂದ ಹಣಕಾಸು ಸಚಿವ ರಾಮೇಶ್ವರ ಓರಾನ್ ಅವರನ್ನು ಕಣಕ್ಕಿಳಿಸಿದೆ.</p><p>ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ತ್ರಿಪುರಾ, ಒಡಿಶಾ ಹಾಗೂ ನಾಗಾಲ್ಯಾಂಡ್ನಲ್ಲಿ ಪಕ್ಷದ ಉಸ್ತುವಾರಿಯಾಗಿರುವ ಅಜಯ್ ಕುಮಾರ್ ಅವರು ಜೆಮ್ಶೆಡ್ಪುರ ಪೂರ್ವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.</p><p>ಅಜಯ್ ಕುಮಾರ್ ಅವರು ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಈ ಹಿಂದೆ ಜೆಮ್ಶೆಡ್ಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಈ ಬಾರಿ ವಿಧಾನಸಭೆಗೆ ಸ್ಪರ್ಧಿಸುತ್ತಿದ್ದಾರೆ.</p><p>ಓರಾನ್ ಸಹ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಜಾರ್ಖಂಡ್ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷರೂ ಹೌದು.</p><p>ಉಳಿದಂತೆ, ಶಿಪ್ಲಿ ನೇಹಾ ಟಿರ್ಕಿ ಅವರನ್ನು ಮಂದಾರ(ಎಸ್ಟಿ ಮೀಸಲು) ಕ್ಷೇತ್ರದಿಂದ ಕಣಕ್ಕಿಳಿಸಿದೆ. ನೇಹಾ ಇದೇ ಕ್ಷೇತ್ರದ ಶಾಸಕರೂ ಹೌದು. ನೇಹಾ ಅವರ ತಂದೆ ಬಂಧು ಟಿರ್ಕಿ ಜಾರ್ಖಂಡ್ನ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ.</p><p>ಇದಕ್ಕೂ ಮುನ್ನ, ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರೊಂದಿಗೆ ಅಭ್ಯರ್ಥಿಗಳ ಕುರಿತಂತೆ ಚರ್ಚೆ ನಡೆಸಲಾಗಿತ್ತು.</p><p>ಜಾರ್ಖಂಡ್ನಲ್ಲಿ ಕಾಂಗ್ರೆಸ್ ಪಕ್ಷವು ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರವನ್ನು ಹಂಚಿಕೊಂಡಿವೆ.</p><p>ಜಾರ್ಖಂಡ್ ಚುನಾವಣೆಯು ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಸ್ಟಿ ಮೀಸಲು ಕ್ಷೇತ್ರ ಲೋಹಾರದಂಗದಿಂದ ಹಣಕಾಸು ಸಚಿವ ರಾಮೇಶ್ವರ ಓರಾನ್ ಅವರನ್ನು ಕಣಕ್ಕಿಳಿಸಿದೆ.</p><p>ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ತ್ರಿಪುರಾ, ಒಡಿಶಾ ಹಾಗೂ ನಾಗಾಲ್ಯಾಂಡ್ನಲ್ಲಿ ಪಕ್ಷದ ಉಸ್ತುವಾರಿಯಾಗಿರುವ ಅಜಯ್ ಕುಮಾರ್ ಅವರು ಜೆಮ್ಶೆಡ್ಪುರ ಪೂರ್ವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.</p><p>ಅಜಯ್ ಕುಮಾರ್ ಅವರು ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಈ ಹಿಂದೆ ಜೆಮ್ಶೆಡ್ಪುರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಈ ಬಾರಿ ವಿಧಾನಸಭೆಗೆ ಸ್ಪರ್ಧಿಸುತ್ತಿದ್ದಾರೆ.</p><p>ಓರಾನ್ ಸಹ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಜಾರ್ಖಂಡ್ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷರೂ ಹೌದು.</p><p>ಉಳಿದಂತೆ, ಶಿಪ್ಲಿ ನೇಹಾ ಟಿರ್ಕಿ ಅವರನ್ನು ಮಂದಾರ(ಎಸ್ಟಿ ಮೀಸಲು) ಕ್ಷೇತ್ರದಿಂದ ಕಣಕ್ಕಿಳಿಸಿದೆ. ನೇಹಾ ಇದೇ ಕ್ಷೇತ್ರದ ಶಾಸಕರೂ ಹೌದು. ನೇಹಾ ಅವರ ತಂದೆ ಬಂಧು ಟಿರ್ಕಿ ಜಾರ್ಖಂಡ್ನ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ.</p><p>ಇದಕ್ಕೂ ಮುನ್ನ, ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರೊಂದಿಗೆ ಅಭ್ಯರ್ಥಿಗಳ ಕುರಿತಂತೆ ಚರ್ಚೆ ನಡೆಸಲಾಗಿತ್ತು.</p><p>ಜಾರ್ಖಂಡ್ನಲ್ಲಿ ಕಾಂಗ್ರೆಸ್ ಪಕ್ಷವು ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರವನ್ನು ಹಂಚಿಕೊಂಡಿವೆ.</p><p>ಜಾರ್ಖಂಡ್ ಚುನಾವಣೆಯು ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>