ಶ್ರೀನಗರ: ಆರ್ಎಸ್ಎಸ್ ಮತ್ತು ಬಿಜೆಪಿಯ ವಿಷಕಾರಿ ಮನಸ್ಥಿತಿಗೆ ನಾವು ಹೆದರುವುದಿಲ್ಲ ಎಂದು ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ವಿರುದ್ಧದ ನೀಡಲಾಗುತ್ತಿರುವ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಕ್ಷ ಆಂದೋಲವನ್ನು ಪ್ರಾರಂಭಿಸಲಿದೆ ಎಂದು ಶನಿವಾರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಮತ್ತು ಬಿಜೆಪಿಯ ನಾಯಕರು ನಮ್ಮ ನಾಯಕರ (ರಾಹುಲ್) ನಾಲಿಗೆ ಕತ್ತರಿಸುವ ಹೇಳಿಕೆ ಸೇರಿದಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ರಾಹುಲ್ ವಿರುದ್ಧ ದ್ವೇಷದ ವಾತಾರವಣ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.