<p><strong>ಕೋಯಿಕ್ಕೋಡ್</strong>: ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ, ಧರ್ಮ ಅಥವಾ ಭಾಷೆ ಆಧಾರದ ಮೇಲೆ ಕಾಂಗ್ರೆಸ್ ಪೌರತ್ವವನ್ನು ನಿರ್ಧರಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಇಂಡಿಯಾ ಪರಿಕಲ್ಪನೆಯ ಅಡಿಯಲ್ಲಿ ಪೌರತ್ವ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.</p><p>ಸಂವಿಧಾನ ಮತ್ತು ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡುವುದು ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಕೆಲಸವಾಗಿದೆ ಎಂದು ಅವರು ಹೇಳಿದರು.</p><p>ಕೋಯಿಕ್ಕೋಡ್ನಲ್ಲಿ ಯುಡಿಎಫ್ನ ಬೃಹತ್ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಧರ್ಮ, ಸಂಸ್ಕೃತಿ, ಭಾಷೆ ಯಾವುದೇ ತಾರತಮ್ಯವಿಲ್ಲದೆ ಪ್ರತಿಯೊಬ್ಬ ಭಾರತೀಯನ ಹಕ್ಕನ್ನು ಸಂವಿಧಾನ ರಕ್ಷಿಸುತ್ತದೆ ೆಂದು ಹೇಳಿದರು. </p><p>ದೇಶದ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ ಎಂಬುದು ಅತ್ಯಂತ ಶೋಚನೀಯ ಸಂಗತಿಯಾಗಿದೆ. ನಮ್ಮ ಬಹು ಭಾಷೆ, ಸಂಪ್ರದಾಯ ಮತ್ತು ಧರ್ಮಗಳು ನಮ್ಮ ಶಕ್ತಿ ಎಂಬುದನ್ನು ಅವರು ಅರ್ಥ ಮಾಡಿಕೊಂಡಿಲ್ಲ ಎಂದು ಟೀಕಿಸಿದರು.</p><p>ಈ ಬಹುವಿಧದ ದೃಷ್ಟಿಕೋನಗಳು ಅತ್ಯಂತ ಸುಂದರವಾದ ದೃಷ್ಟಿಕೋನಗಳಿಂದ ಬಂದಿರುವುದನ್ನು ಅವರು ಕಾಣಲಾರರು. ಏಕೆಂದರೆ, ಅವರ ಏಕೈಕ ಗುರಿ ಅಧಿಕಾರದಲ್ಲಿ ಮುಂದುವರಿಯುವುದು ಮಾತ್ರ ಎಂದು ರಾಹುಲ್ ಆರೋಪಿಸಿದರು. ು.</p><p>ರಾಜಕೀಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಚುನಾವಣಾ ಬಾಂಡ್ ಜಾರಿಗೆ ತರಲಾಗಿದೆ ಎಂದು ಮೋದಿ ಹೇಳುತ್ತಾರೆ. ಆದರೆ, ಅದನ್ನು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ ರಾಹುಲ್ ಗಾಂಧಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್</strong>: ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ, ಧರ್ಮ ಅಥವಾ ಭಾಷೆ ಆಧಾರದ ಮೇಲೆ ಕಾಂಗ್ರೆಸ್ ಪೌರತ್ವವನ್ನು ನಿರ್ಧರಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಇಂಡಿಯಾ ಪರಿಕಲ್ಪನೆಯ ಅಡಿಯಲ್ಲಿ ಪೌರತ್ವ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.</p><p>ಸಂವಿಧಾನ ಮತ್ತು ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡುವುದು ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಕೆಲಸವಾಗಿದೆ ಎಂದು ಅವರು ಹೇಳಿದರು.</p><p>ಕೋಯಿಕ್ಕೋಡ್ನಲ್ಲಿ ಯುಡಿಎಫ್ನ ಬೃಹತ್ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಧರ್ಮ, ಸಂಸ್ಕೃತಿ, ಭಾಷೆ ಯಾವುದೇ ತಾರತಮ್ಯವಿಲ್ಲದೆ ಪ್ರತಿಯೊಬ್ಬ ಭಾರತೀಯನ ಹಕ್ಕನ್ನು ಸಂವಿಧಾನ ರಕ್ಷಿಸುತ್ತದೆ ೆಂದು ಹೇಳಿದರು. </p><p>ದೇಶದ ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ ಎಂಬುದು ಅತ್ಯಂತ ಶೋಚನೀಯ ಸಂಗತಿಯಾಗಿದೆ. ನಮ್ಮ ಬಹು ಭಾಷೆ, ಸಂಪ್ರದಾಯ ಮತ್ತು ಧರ್ಮಗಳು ನಮ್ಮ ಶಕ್ತಿ ಎಂಬುದನ್ನು ಅವರು ಅರ್ಥ ಮಾಡಿಕೊಂಡಿಲ್ಲ ಎಂದು ಟೀಕಿಸಿದರು.</p><p>ಈ ಬಹುವಿಧದ ದೃಷ್ಟಿಕೋನಗಳು ಅತ್ಯಂತ ಸುಂದರವಾದ ದೃಷ್ಟಿಕೋನಗಳಿಂದ ಬಂದಿರುವುದನ್ನು ಅವರು ಕಾಣಲಾರರು. ಏಕೆಂದರೆ, ಅವರ ಏಕೈಕ ಗುರಿ ಅಧಿಕಾರದಲ್ಲಿ ಮುಂದುವರಿಯುವುದು ಮಾತ್ರ ಎಂದು ರಾಹುಲ್ ಆರೋಪಿಸಿದರು. ು.</p><p>ರಾಜಕೀಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಚುನಾವಣಾ ಬಾಂಡ್ ಜಾರಿಗೆ ತರಲಾಗಿದೆ ಎಂದು ಮೋದಿ ಹೇಳುತ್ತಾರೆ. ಆದರೆ, ಅದನ್ನು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ ರಾಹುಲ್ ಗಾಂಧಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>