‘ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ನೇರವಾಗಿ ಸಂಬಂಧಿಸಿ ವಿಷಯದ ಬಗ್ಗೆ ನಿಮ್ಮ ಗಮನ ಸೆಳೆಯಲು ಬಯಸುತ್ತೇನೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ಆಕ್ಷೇಪಾರ್ಹ, ಹಿಂಸಾತ್ಮಕ, ಅಸಭ್ಯ ಹೇಳಿಕೆಗಳ ಬಗ್ಗೆ ನಿಮಗೂ ತಿಳಿದಿರಬಹುದು. ಬಿಜೆಪಿ ಮತ್ತು ಮಿತ್ರಪಕ್ಷಗಳ ನಾಯಕರ, ಹಿಂಸೆಯನ್ನು ಪ್ರಚೋದಿಸುವ ಭಾಷೆಯು ಭವಿಷ್ಯಕ್ಕೆ ಹಾನಿಕರ ಎಂದು ವಿಷಾದದಿಂದ ಹೇಳಬೇಕಾಗಿದೆ. ಕೇಂದ್ರ ರೈಲ್ವೆ ಸಚಿವಾಲಯದ ರಾಜ್ಯ ಖಾತೆ ಸಚಿವ ಮತ್ತು ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಅವರನ್ನು ‘ನಂಬರ್ ಒನ್ ಭಯೋತ್ಪಾದಕ’ ಎಂದು ಕರೆದಿರುವುದು ಆಘಾತ ಉಂಟುಮಾಡಿದೆ’ ಎಂದು ಹೇಳಿದ್ದಾರೆ.