ಈ ಘಟನೆಯು ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲೂ ಪ್ರತಿಧ್ವನಿಸಿದ್ದು, ಕಲಾಪದ ವೇಳೆ ಪಲುಸ್– ಕಾಡೆಗಾವ್ನ ಕಾಂಗ್ರೆಸ್ ಶಾಸಕ ವಿಶ್ವಜಿತ್ ಕದಮ್ ಈ ಘಟನೆಯನ್ನು ಪ್ರಸ್ತಾಪಿಸಿದರು. ‘ಇದೊಂದು ಗಂಭೀರ ಘಟನೆ. ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಮಾಡಬೇಕು’ ಎಂದು ಆಗ್ರಹಿಸಿದರು.