ಕಳೆದ ವಾರ ದೆಹಲಿಯ ಕಿಶನ್ಗಂಜ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸಾರಿಗೆ ಕಚೇರಿ ಪ್ರವೇಶಿಸಿದ ದುಷ್ಕರ್ಮಿಗಳು ಅಲ್ಲಿದ್ದ ವ್ಯಕ್ತಿಗೆ ಬಂದೂಕು ತೋರಿಸಿ ಹಣ ದರೋಡೆ ಮಾಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತರಾದ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.
ಪ್ರಕರಣ ಸಂಬಂಧ ಎಂಟು ಮಂದಿಯನ್ನು ಗುರುವಾರ ಬಂಧಿಸಲಾಗಿದೆ. ನಾಲ್ಕು ಮಂದಿಯನ್ನು ಮೊದಲೇ ಬಂಧಿಸಲಾಗಿತ್ತು. ಆರೋಪಿಗಳ ಗುರುತನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.