ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಬಕಾರಿ ನೀತಿ ಹಗರಣ: ಮನೀಶ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

Published : 6 ಜುಲೈ 2024, 5:55 IST
Last Updated : 6 ಜುಲೈ 2024, 5:55 IST
ಫಾಲೋ ಮಾಡಿ
Comments

ನವದೆಹಲಿ: ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಇಂದು (ಶನಿವಾರ) ಆದೇಶ ಪ್ರಕಟಿಸಿದೆ.

ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.

ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್‌ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್‌ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ 9ನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ವಿನೋದ್ ಚೌಹಾನ್ ಎನ್ನುವ ವ್ಯಕ್ತಿಯನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಕರಣದ ತನಿಖೆಯ ಭಾಗವಾಗಿ ಚೌಹಾನ್ ಅವರನ್ನು ಮೇ ತಿಂಗಳಲ್ಲಿ ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್, ಬಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ, ಉದ್ಯಮಿಗಳು ಸೇರಿದಂತೆ ಹಲವರನ್ನು ಬಂಧಿಸಿದ್ದು, ಚೌಹಾನ್ ಈ ಸಂಬಂಧ ಬಂಧನಕ್ಕೊಳಗಾದ 18ನೇ ಆರೋಪಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT