‘ಶಸ್ತ್ರಚಿಕಿತ್ಸೆಗೆ ಒಳಗಾದ ಬಾಲಕ ಕಳೆದ ತಿಂಗಳು ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಾಲಿಗೆ ಗಾಯವಾಗಿತ್ತು. ಜೂನ್ 15ರಂದು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಇತ್ತೀಚೆಗೆ ಆತನ ಕಾಲಿನ ಬದಲಾಗಿ ಮರ್ಮಾಂಗಕ್ಕೆ ‘ಸುನ್ನತಿ’ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ವೈದ್ಯರಿಗೆ ತಮ್ಮ ತಪ್ಪು ಅರಿವಿಗೆ ಬಂದ ನಂತರ ಗಾಯಗೊಂಡಿದ್ದ ಕಾಲಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ’ ಎಂದು ಬಾಲಕನ ಪೋಷಕರು ಸುದ್ದಿಗಾರರಿಗೆ ತಿಳಿಸಿದ್ದಾರೆ.