ಹೈದರಾಬಾದ್: ಹೈದರಾಬಾದ್ ಕ್ರಿಕೆಟ್ ಅಸೋಶಿಯೇಷನ್ನಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅವ್ಯವಹಾರ ಸಂಬಂಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಹೈದರಾಬಾದ್ ಕ್ರಿಕೆಟ್ ಅಸೋಶಿಯೇಷನ್ನಲ್ಲಿ ನಡೆದಿದೆ ಎನ್ನಲಾದ ₹ 20 ಕೋಟಿ ಹಣಕಾಸಿನ ಅವ್ಯವಹಾರದ ಕುರಿತು ತೆಲಂಗಾಣದ ಎಸಿಬಿ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಇ.ಡಿ ಪ್ರಕರಣ ದಾಖಲು ಮಾಡಿಕೊಂಡಿದೆ.