<p><strong>ಶಿಮ್ಲಾ:</strong> ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರನೌತ್ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹಿಮಾಚಲ ಪ್ರದೇಶ ಹೈಕೋರ್ಟ್, ಅವರಿಗೆ ನೋಟಿಸ್ ಜಾರಿ ಮಾಡಿದೆ.</p><p>ಆಗಸ್ಟ್ 21ರ ಒಳಗಾಗಿ ಉತ್ತರ ನೀಡಬೇಕು ಎಂದು ನ್ಯಾಯಮೂರ್ತಿ ಜೋತ್ಸ್ನಾ ರೆವಾಲ್ ಅವರು ನೋಟಿಸ್ ನೀಡುವ ವೇಳೆ ನಿರ್ದೇಶನ ನೀಡಿದ್ದಾರೆ.</p>.ಜನರು ನನ್ನನ್ನು ಭೇಟಿಯಾಗಲು ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು: ಕಂಗನಾ ರನೌತ್.<p>ಕಳೆದ ಲೋಕಸಭೆ ಚುನಾವಣೆ ವೇಳೆ ತನ್ನ ನಾಮಪತ್ರವನ್ನು ಚುನಾವಣಾ ಅಧಿಕಾರಿ (ಮಂಡಿಯ ಜಿಲ್ಲಾಧಿಕಾರಿ) ಅನ್ಯಾಯವಾಗಿ ತಿರಸ್ಕರಿಸಿದ್ದರು ಎಂದು ಕಿನ್ನೂರು ನಿವಾಸಿ ಲಾಯಕ್ ರಾಮ್ ನೇಗಿ ಎಂಬವರು ದೂರು ಸಲ್ಲಿಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯವರನ್ನೂ ಪಕ್ಷಗಾರರನ್ನಾಗಿ ಮಾಡಿದ್ದರು.</p><p>ಅರಣ್ಯ ಇಲಾಖೆಯ ಮಾಜಿ ಅಧಿಕಾರಿಯಾಗಿರುವ ನೇಗಿ, ಮೇ 14ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮೇ 15ರಂದು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ ಚುನಾವಣಾ ಅಧಿಕಾರಿ ಅದನ್ನು ಸ್ವೀಕರಿಸಿರಲಿಲ್ಲ ಎಂದು ನೇಗಿ ಆರೋಪಿದ್ದಾರೆ.</p>.ಕಂಗನಾ ಮೇಲೆ ಹಲ್ಲೆ ಮಾಡಿದ್ದ CISFನ ಕೌರ್ ಬೆಂಗಳೂರು ಏರ್ಪೋರ್ಟ್ಗೆ ಎತ್ತಂಗಡಿ.<p>‘ವಿದ್ಯುತ್, ದೂರವಾಣಿ ಹಾಗೂ ನೀರಾವರಿ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಸಲ್ಲಿಸಬೇಕು ಎಂದು ಸೂಚಿಸಲಾಗಿತ್ತು. ಅದಕ್ಕೆ ಒಂದು ದಿನದ ಅವಕಾಶ ನೀಡಲಾಗಿತ್ತು. ಆದರೆ ದಾಖಲೆಗಳನ್ನು ಸಲ್ಲಿಸುವಾಗ ಅದನ್ನು ಸ್ವೀಕರಿಸಲು ಚುನಾವಣಾಧಿಕಾರಿ ನಿರಾಕರಿಸಿ, ನಾಮಪತ್ರವನ್ನು ತಿರಸ್ಕರಿಸಿದ್ದರು’ ಎಂದು ನೇಗಿ ದೂರಿನಲ್ಲಿ ಹೇಳಿದ್ದರು.</p><p>‘ಒಂದು ವೇಳೆ ತಿರಸ್ಕೃತವಾಗದಿದ್ದರೆ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತಿದ್ದೆ. ಹೀಗಾಗಿ ಮಂಡಿ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಬೇಕು’ ಎಂದು ಅವರು ಕೋರಿದ್ದರು.</p><p>ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಅವರನ್ನು 74,775 ಮತಗಳ ಅಂತರದಿಂದ ಸೋಲಿಸಿ ಕಂಗನಾ ರನೌತ್ ಗೆಲುವು ಸಾಧಿಸಿದ್ದರು.</p> .ರಾಹುಲ್ ಗಾಂಧಿ ಉತ್ತಮ ಸ್ಟ್ಯಾಂಡ್ಅಪ್ ಕಾಮಿಡಿಯನ್ ಇದ್ದಂತೆ: ನಟಿ ಕಂಗನಾ ಲೇವಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರನೌತ್ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹಿಮಾಚಲ ಪ್ರದೇಶ ಹೈಕೋರ್ಟ್, ಅವರಿಗೆ ನೋಟಿಸ್ ಜಾರಿ ಮಾಡಿದೆ.</p><p>ಆಗಸ್ಟ್ 21ರ ಒಳಗಾಗಿ ಉತ್ತರ ನೀಡಬೇಕು ಎಂದು ನ್ಯಾಯಮೂರ್ತಿ ಜೋತ್ಸ್ನಾ ರೆವಾಲ್ ಅವರು ನೋಟಿಸ್ ನೀಡುವ ವೇಳೆ ನಿರ್ದೇಶನ ನೀಡಿದ್ದಾರೆ.</p>.ಜನರು ನನ್ನನ್ನು ಭೇಟಿಯಾಗಲು ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು: ಕಂಗನಾ ರನೌತ್.<p>ಕಳೆದ ಲೋಕಸಭೆ ಚುನಾವಣೆ ವೇಳೆ ತನ್ನ ನಾಮಪತ್ರವನ್ನು ಚುನಾವಣಾ ಅಧಿಕಾರಿ (ಮಂಡಿಯ ಜಿಲ್ಲಾಧಿಕಾರಿ) ಅನ್ಯಾಯವಾಗಿ ತಿರಸ್ಕರಿಸಿದ್ದರು ಎಂದು ಕಿನ್ನೂರು ನಿವಾಸಿ ಲಾಯಕ್ ರಾಮ್ ನೇಗಿ ಎಂಬವರು ದೂರು ಸಲ್ಲಿಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯವರನ್ನೂ ಪಕ್ಷಗಾರರನ್ನಾಗಿ ಮಾಡಿದ್ದರು.</p><p>ಅರಣ್ಯ ಇಲಾಖೆಯ ಮಾಜಿ ಅಧಿಕಾರಿಯಾಗಿರುವ ನೇಗಿ, ಮೇ 14ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮೇ 15ರಂದು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ ಚುನಾವಣಾ ಅಧಿಕಾರಿ ಅದನ್ನು ಸ್ವೀಕರಿಸಿರಲಿಲ್ಲ ಎಂದು ನೇಗಿ ಆರೋಪಿದ್ದಾರೆ.</p>.ಕಂಗನಾ ಮೇಲೆ ಹಲ್ಲೆ ಮಾಡಿದ್ದ CISFನ ಕೌರ್ ಬೆಂಗಳೂರು ಏರ್ಪೋರ್ಟ್ಗೆ ಎತ್ತಂಗಡಿ.<p>‘ವಿದ್ಯುತ್, ದೂರವಾಣಿ ಹಾಗೂ ನೀರಾವರಿ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಸಲ್ಲಿಸಬೇಕು ಎಂದು ಸೂಚಿಸಲಾಗಿತ್ತು. ಅದಕ್ಕೆ ಒಂದು ದಿನದ ಅವಕಾಶ ನೀಡಲಾಗಿತ್ತು. ಆದರೆ ದಾಖಲೆಗಳನ್ನು ಸಲ್ಲಿಸುವಾಗ ಅದನ್ನು ಸ್ವೀಕರಿಸಲು ಚುನಾವಣಾಧಿಕಾರಿ ನಿರಾಕರಿಸಿ, ನಾಮಪತ್ರವನ್ನು ತಿರಸ್ಕರಿಸಿದ್ದರು’ ಎಂದು ನೇಗಿ ದೂರಿನಲ್ಲಿ ಹೇಳಿದ್ದರು.</p><p>‘ಒಂದು ವೇಳೆ ತಿರಸ್ಕೃತವಾಗದಿದ್ದರೆ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸುತ್ತಿದ್ದೆ. ಹೀಗಾಗಿ ಮಂಡಿ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಬೇಕು’ ಎಂದು ಅವರು ಕೋರಿದ್ದರು.</p><p>ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಅವರನ್ನು 74,775 ಮತಗಳ ಅಂತರದಿಂದ ಸೋಲಿಸಿ ಕಂಗನಾ ರನೌತ್ ಗೆಲುವು ಸಾಧಿಸಿದ್ದರು.</p> .ರಾಹುಲ್ ಗಾಂಧಿ ಉತ್ತಮ ಸ್ಟ್ಯಾಂಡ್ಅಪ್ ಕಾಮಿಡಿಯನ್ ಇದ್ದಂತೆ: ನಟಿ ಕಂಗನಾ ಲೇವಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>