<p><strong>ನವದೆಹಲಿ</strong>: ಎಲ್ಗಾರ್ ಪರಿಷತ್– ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ನವ್ಲಾಖಾ ಅವರಿಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ಮೇಲಿನ ತಡೆ ವಿಸ್ತರಣೆಗೆ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎಸ್ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ.</p><p>ಗೃಹ ಬಂಧನದ ಭದ್ರತಾ ವೆಚ್ಚವಾಗಿ ₹20 ಲಕ್ಷ ಪಾವತಿಸಬೇಕೆಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ.</p><p>‘ಬಾಂಬೆ ಹೈಕೋರ್ಟ್ ನೀಡಿರುವ ಜಾಮೀನು ಮೇಲಿನ ತಡೆ ವಿಸ್ತರಿಸದಿರಲು ನಾವು ನಿರ್ಧರಿಸಿದ್ದೇವೆ. ತನಿಖೆಯು ಬಹಳ ವರ್ಷ ತೆಗೆದುಕೊಳ್ಳುತ್ತದೆ. ಈಗಾಗಲೇ ಹಲವು ವರ್ಷ ಕಳೆದಿದೆ. ಈ ಬಗ್ಗೆ ಹೆಚ್ಚು ಎಳೆದಾಡದೆ ತಡೆ ವಿಸ್ತರಿಸದಿರಲು ನಿರ್ಧರಿಸಲಾಗಿದೆ. ಗೃಹ ಬಂಧನದ ಭದ್ರತಾ ಖರ್ಚಾಗಿ ಶೀಘ್ರ ₹20 ಲಕ್ಷ ನೀಡುವಂತೆ ಆದೇಶಿಸುತ್ತೇವೆ’ ಎಂದು ಪೀಠ ಹೇಳಿದೆ.</p><p>ನವ್ಲಾಖಾ ಅವರು 4 ವರ್ಷಗಳಿಂದ ಜೈಲಿನಲ್ಲಿದ್ದು, ಅವರ ಮೇಲಿನ ದೋಷಾರೋಪಟ್ಟಿ ಇನ್ನೂ ಸಲ್ಲಿಸಲಾಗಿಲ್ಲ ಎಂಬುದನ್ನು ನ್ಯಾಯಾಲಯ ಪರಿಗಣಿಸಿದೆ.</p><p>ಕಳೆದ ವರ್ಷ ಡಿಸೆಂಬರ್ 19ರಂದು ಜಾಮೀನು ಮಂಜೂರು ಮಾಡಿದ್ದ ಬಾಂಬೆ ಹೈಕೋರ್ಟ್, ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬೇಕಿರುವುದರಿಂದ ಸಮಯ ನೀಡುವಂತೆ ಎನ್ಐಎ ಕೋರಿದ್ದರಿಂದ 3 ವಾರಗಳ ಕಾಲ ಜಾಮೀನಿಗೆ ತಡೆ ನೀಡಿತ್ತು.</p><p>2018ರ ಆಗಸ್ಟ್ ತಿಂಗಳಲ್ಲಿ ಬಂಧನಕ್ಕೀಡಾಗಿದ್ದ ನವ್ಲಾಖಾ ಅವರನ್ನು ಗೃಹ ಬಂಧನದಲ್ಲಿರಿಸಲು ಕಳೆದ ವರ್ಷದ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಸದ್ಯ, ಅವರು ನವಿ ಮುಂಬೈನ ನಿವಾಸದಲ್ಲಿದ್ದಾರೆ.</p><p>2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ನವ್ಲಾಖಾ ಅವರನ್ನು ಬಂಧಿಸಲಾಗಿತ್ತು. ಅವರ ಹೇಳಿಕೆ ಹಿಂಸಾಚಾರಕ್ಕೆ ಎಡೆ ಮಾಡಿದೆ ಎಂಬುದು ಪೊಲೀಸರ ಆರೋಪವಾಗಿದೆ.</p><p>ಪ್ರಕರಣ ಸಂಬಂಧ ಈವರೆಗೆ 15 ಹೋರಾಟಗಾರರನ್ನು ಬಂಧಿಸಲಾಗಿದ್ದು, ಐದು ಮಂದಿ ಜಾಮೀನು ಪಡೆದು ಹೊರಗಿದ್ದಾರೆ.</p> .ಗೌತಮ್ ನವ್ಲಾಖಾ ಗೃಹ ಬಂಧನಕ್ಕೆ ‘ಸುಪ್ರೀಂ’ ಅವಕಾಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎಲ್ಗಾರ್ ಪರಿಷತ್– ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.</p><p>ನವ್ಲಾಖಾ ಅವರಿಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದ ಮೇಲಿನ ತಡೆ ವಿಸ್ತರಣೆಗೆ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಎಸ್ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ.</p><p>ಗೃಹ ಬಂಧನದ ಭದ್ರತಾ ವೆಚ್ಚವಾಗಿ ₹20 ಲಕ್ಷ ಪಾವತಿಸಬೇಕೆಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ.</p><p>‘ಬಾಂಬೆ ಹೈಕೋರ್ಟ್ ನೀಡಿರುವ ಜಾಮೀನು ಮೇಲಿನ ತಡೆ ವಿಸ್ತರಿಸದಿರಲು ನಾವು ನಿರ್ಧರಿಸಿದ್ದೇವೆ. ತನಿಖೆಯು ಬಹಳ ವರ್ಷ ತೆಗೆದುಕೊಳ್ಳುತ್ತದೆ. ಈಗಾಗಲೇ ಹಲವು ವರ್ಷ ಕಳೆದಿದೆ. ಈ ಬಗ್ಗೆ ಹೆಚ್ಚು ಎಳೆದಾಡದೆ ತಡೆ ವಿಸ್ತರಿಸದಿರಲು ನಿರ್ಧರಿಸಲಾಗಿದೆ. ಗೃಹ ಬಂಧನದ ಭದ್ರತಾ ಖರ್ಚಾಗಿ ಶೀಘ್ರ ₹20 ಲಕ್ಷ ನೀಡುವಂತೆ ಆದೇಶಿಸುತ್ತೇವೆ’ ಎಂದು ಪೀಠ ಹೇಳಿದೆ.</p><p>ನವ್ಲಾಖಾ ಅವರು 4 ವರ್ಷಗಳಿಂದ ಜೈಲಿನಲ್ಲಿದ್ದು, ಅವರ ಮೇಲಿನ ದೋಷಾರೋಪಟ್ಟಿ ಇನ್ನೂ ಸಲ್ಲಿಸಲಾಗಿಲ್ಲ ಎಂಬುದನ್ನು ನ್ಯಾಯಾಲಯ ಪರಿಗಣಿಸಿದೆ.</p><p>ಕಳೆದ ವರ್ಷ ಡಿಸೆಂಬರ್ 19ರಂದು ಜಾಮೀನು ಮಂಜೂರು ಮಾಡಿದ್ದ ಬಾಂಬೆ ಹೈಕೋರ್ಟ್, ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬೇಕಿರುವುದರಿಂದ ಸಮಯ ನೀಡುವಂತೆ ಎನ್ಐಎ ಕೋರಿದ್ದರಿಂದ 3 ವಾರಗಳ ಕಾಲ ಜಾಮೀನಿಗೆ ತಡೆ ನೀಡಿತ್ತು.</p><p>2018ರ ಆಗಸ್ಟ್ ತಿಂಗಳಲ್ಲಿ ಬಂಧನಕ್ಕೀಡಾಗಿದ್ದ ನವ್ಲಾಖಾ ಅವರನ್ನು ಗೃಹ ಬಂಧನದಲ್ಲಿರಿಸಲು ಕಳೆದ ವರ್ಷದ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಸದ್ಯ, ಅವರು ನವಿ ಮುಂಬೈನ ನಿವಾಸದಲ್ಲಿದ್ದಾರೆ.</p><p>2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ನವ್ಲಾಖಾ ಅವರನ್ನು ಬಂಧಿಸಲಾಗಿತ್ತು. ಅವರ ಹೇಳಿಕೆ ಹಿಂಸಾಚಾರಕ್ಕೆ ಎಡೆ ಮಾಡಿದೆ ಎಂಬುದು ಪೊಲೀಸರ ಆರೋಪವಾಗಿದೆ.</p><p>ಪ್ರಕರಣ ಸಂಬಂಧ ಈವರೆಗೆ 15 ಹೋರಾಟಗಾರರನ್ನು ಬಂಧಿಸಲಾಗಿದ್ದು, ಐದು ಮಂದಿ ಜಾಮೀನು ಪಡೆದು ಹೊರಗಿದ್ದಾರೆ.</p> .ಗೌತಮ್ ನವ್ಲಾಖಾ ಗೃಹ ಬಂಧನಕ್ಕೆ ‘ಸುಪ್ರೀಂ’ ಅವಕಾಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>