<p><strong>ತಿರುವನಂತಪುರ</strong>: ರಾಜ್ಯವನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಮೂಲಕ ಸಹಕಾರ ತತ್ವವನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿ ಕೇರಳ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಗುರುವಾರ ಗೊತ್ತುವಳಿಯನ್ನು ಅಂಗೀಕರಿಸಿದೆ.</p>.<p>ಸದನದಲ್ಲಿ ವಿರೋಧ ಪಕ್ಷದ ಗೈರುಹಾಜರಿಯ ನಡುವೆಯೂ, ಗೊತ್ತುವಳಿಯು ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಸ್ಪೀಕರ್ ಎ.ಎನ್ ಶಮ್ಶೀರ್ ಘೋಷಣೆ ಮಾಡಿದ್ದಾರೆ. </p>.<p>ಗೊತ್ತುವಳಿಯನ್ನು ಮಂಡಿಸಿದ ಹಣಕಾಸು ಸಚಿವ ಕೆ.ಎನ್ ಗೋಪಾಲ್ ಅವರು, ‘ ಹಣಕಾಸು ಆಯೋಗದ ಸಲಹೆಗಳನ್ನು ನಿರಾಕರಿಸಿರುವ ಕೇಂದ್ರವು ಕೇರಳದ ಖರೀದಿ ಮಿತಿಯನ್ನು ಕಡಿಮೆಗೊಳಿಸಿದೆ ಮತ್ತು ಕಂದಾಯ ಕೊರತೆ ಅನುದಾನಕ್ಕೆ ಕತ್ತರಿ ಹಾಕಿದೆ’ ಎಂದು ಆರೋಪಿಸಿದರು.</p>.<p>'ಕೇಂದ್ರ ಸರ್ಕಾರದ ಚಟುವಟಿಕೆಗಳು ದೇಶದ ಸಹಕಾರಿ ತತ್ವಕ್ಕೆ ಗಾಸಿಗೊಳಿಸುತ್ತಿವೆ. ಕೆಲವೊಂದು ವಿಚಾರಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ಇದೆ. ಹಾಗೆಯೇ ಸಂವಿಧಾನವು ರಾಜ್ಯಗಳಿಗೂ ಕೆಲವೊಂದು ವಿಚಾರಗಳಲ್ಲಿ ಸಂಪೂರ್ಣ ಅಧಿಕಾರವನ್ನು ನೀಡಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ರಾಜ್ಯವನ್ನು ಆರ್ಥಿಕವಾಗಿ ದುರ್ಬಲಗೊಳಿಸುವ ಮೂಲಕ ಸಹಕಾರ ತತ್ವವನ್ನು ನಾಶ ಮಾಡಲಾಗಿದೆ ಎಂದು ಆರೋಪಿಸಿ ಕೇರಳ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಗುರುವಾರ ಗೊತ್ತುವಳಿಯನ್ನು ಅಂಗೀಕರಿಸಿದೆ.</p>.<p>ಸದನದಲ್ಲಿ ವಿರೋಧ ಪಕ್ಷದ ಗೈರುಹಾಜರಿಯ ನಡುವೆಯೂ, ಗೊತ್ತುವಳಿಯು ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಸ್ಪೀಕರ್ ಎ.ಎನ್ ಶಮ್ಶೀರ್ ಘೋಷಣೆ ಮಾಡಿದ್ದಾರೆ. </p>.<p>ಗೊತ್ತುವಳಿಯನ್ನು ಮಂಡಿಸಿದ ಹಣಕಾಸು ಸಚಿವ ಕೆ.ಎನ್ ಗೋಪಾಲ್ ಅವರು, ‘ ಹಣಕಾಸು ಆಯೋಗದ ಸಲಹೆಗಳನ್ನು ನಿರಾಕರಿಸಿರುವ ಕೇಂದ್ರವು ಕೇರಳದ ಖರೀದಿ ಮಿತಿಯನ್ನು ಕಡಿಮೆಗೊಳಿಸಿದೆ ಮತ್ತು ಕಂದಾಯ ಕೊರತೆ ಅನುದಾನಕ್ಕೆ ಕತ್ತರಿ ಹಾಕಿದೆ’ ಎಂದು ಆರೋಪಿಸಿದರು.</p>.<p>'ಕೇಂದ್ರ ಸರ್ಕಾರದ ಚಟುವಟಿಕೆಗಳು ದೇಶದ ಸಹಕಾರಿ ತತ್ವಕ್ಕೆ ಗಾಸಿಗೊಳಿಸುತ್ತಿವೆ. ಕೆಲವೊಂದು ವಿಚಾರಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ಇದೆ. ಹಾಗೆಯೇ ಸಂವಿಧಾನವು ರಾಜ್ಯಗಳಿಗೂ ಕೆಲವೊಂದು ವಿಚಾರಗಳಲ್ಲಿ ಸಂಪೂರ್ಣ ಅಧಿಕಾರವನ್ನು ನೀಡಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>