<p><strong>ಮುಂಬೈ (ಪಿಟಿಐ):</strong> ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ದಾಳಿಕೋರರಿಗೆ ಆರ್ಥಿಕ ನೆರವು ನೀಡಿದ ಆರೋಪದ ಮೇಲೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯನೊಬ್ಬನನ್ನು ರಾಜಸ್ಥಾನದಲ್ಲಿ ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಯನ್ನು ರಫೀಕ್ ಚೌದರಿ (37) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದಂತಾಗಿದೆ. ಈ ಪೈಕಿ ಒಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>‘ಬಂಧಿತರ ವಿಚಾರಣೆ ವೇಳೆ ಪ್ರಕರಣದಲ್ಲಿ ಚೌದರಿಯ ಪಾತ್ರ ಬಯಲಾಗಿದೆ. ಈತ ಶೂಟರ್ಗಳಾದ ಸಾಗರ್ ಪಾಲ್ ಮತ್ತು ವಿಕಿ ಗುಪ್ತಾ ಜೊತೆ ಈತ ನೇರ ಸಂಪರ್ಕದಲ್ಲಿದ್ದ’ ಎಂದು ಹೇಳಿದ್ದಾರೆ.</p>.<p>‘ಪಾಲ್ ಮತ್ತು ಗುಪ್ತಾ ಬೈಕ್ ಖರೀದಿಸಲು ಮತ್ತು ಬಾಡಿಗೆ ಮನೆ ಮಾಡಲು ಚೌದರಿ ಹಣಕಾಸು ನೆರವು ನೀಡಿದ್ದ ಎಂದು ಶಂಕಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಏಪ್ರಿಲ್ 14ರಂದು ಎರಡು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಎದುರು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ದಾಳಿಕೋರರಿಗೆ ಆರ್ಥಿಕ ನೆರವು ನೀಡಿದ ಆರೋಪದ ಮೇಲೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯನೊಬ್ಬನನ್ನು ರಾಜಸ್ಥಾನದಲ್ಲಿ ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಯನ್ನು ರಫೀಕ್ ಚೌದರಿ (37) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದಂತಾಗಿದೆ. ಈ ಪೈಕಿ ಒಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>‘ಬಂಧಿತರ ವಿಚಾರಣೆ ವೇಳೆ ಪ್ರಕರಣದಲ್ಲಿ ಚೌದರಿಯ ಪಾತ್ರ ಬಯಲಾಗಿದೆ. ಈತ ಶೂಟರ್ಗಳಾದ ಸಾಗರ್ ಪಾಲ್ ಮತ್ತು ವಿಕಿ ಗುಪ್ತಾ ಜೊತೆ ಈತ ನೇರ ಸಂಪರ್ಕದಲ್ಲಿದ್ದ’ ಎಂದು ಹೇಳಿದ್ದಾರೆ.</p>.<p>‘ಪಾಲ್ ಮತ್ತು ಗುಪ್ತಾ ಬೈಕ್ ಖರೀದಿಸಲು ಮತ್ತು ಬಾಡಿಗೆ ಮನೆ ಮಾಡಲು ಚೌದರಿ ಹಣಕಾಸು ನೆರವು ನೀಡಿದ್ದ ಎಂದು ಶಂಕಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಏಪ್ರಿಲ್ 14ರಂದು ಎರಡು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಎದುರು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>