ಶರಣಾದ ಇಬ್ಬರು ನಕ್ಸಲರ ತಲೆಯ ಮೇಲೆ ₹3 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಆದಿವಾಸಿಗಳ ಮೇಲೆ ಮಾವೋವಾದಿಗಳು ನಡೆಸಿದ ದೌರ್ಜನ್ಯಗಳು ಮತ್ತು ಮಾವೋವಾದಿ ಸಿದ್ಧಾಂತದಿಂದ ನಿರಾಶೆಗೊಂಡ ಇವರು ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಹಿರಿಯ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.